ಹಾಸನ: ರೈತರಿಗೆ, ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ಪಶು ಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ತರಬೇತಿಯನ್ನು ಏರ್ಪಡಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ತರಬೇತಿಯಲ್ಲಿ ಭಾಗವಹಿಸುವ ಶಿಭಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ.
ಆಸಕ್ತಿಯುಳ್ಳವರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಎರಡು ಭಾವಚಿತ್ರ ಹಾಗೂ ಪರಿಶಿಷ್ಟ ಜಾತಿ / ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣ ಪತ್ರದೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಿಗ್ಗೆ 10.30 ಗಂಟೆಯೊಳಗೆ ಉಪ ನಿರ್ದೆಶಕರ ಕಛೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಸಂತೇಪೇಟೆ, ಹಾಸನದಲ್ಲಿ ಹಾಜರಾಗಬೇಕು.
ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಜೂನ್ 05 ಮತ್ತು 6ರಂದು, ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಣಿಕೆ ತರಬೇತಿ ಜೂನ್ 17 ಮತ್ತು 18 ರಂದು, ರೈತರಿಗೆ ವೈಜ್ಞಾನಿ ಕೋಳಿ ಸಾಕಣಿಕೆ ತರಬೇತಿ ಜೂನ್ 20 ಮತ್ತು 21 ರಂದು ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-235226 ಸಂಪರ್ಕಿಸಹುದು.




