ಶಿವಮೊಗ್ಗ: ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಬೆಳೆ ಸಮೀಕ್ಷೆ ಪ್ರಕಾರ ಹಿಂದಿನ ಎರಡು ವರ್ಷಗಳಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಥವಾ ಕನಿಷ್ಠ ಒಂದು ವರ್ಷದಲ್ಲಿಯಾದರೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್




