ಬೆಂಗಳೂರು: ಕುಮಾರಸ್ವಾಮಿಯವರಂತೆ ವೈಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಡಿ ನೋಟಿಫಿಕೇಷನ್ ಮಾಡಲು ಮುಂದಾಗಿದ್ದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅದೇ ಜಮೀನನ್ನು ಸತ್ತವರ ಹೆಸರಿಗೆ ಡಿನೋಟಿಫೈ ಮಾಡಲಾಗಿತ್ತು. ಕೊನೆಗೆ ಈ ಜಮೀನು ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿಯಾಗಿತ್ತು ಎಂದು ಈ ಹಿಂದೆ ಕೃಷ್ಣ ಬೈರೇಗೌಡ ಆರೋಪಿಸಿದ್ದರು. ಈ ಪ್ರಕರಣವನ್ನು ಉಲ್ಲೇಖಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸತ್ತವರ ಹೆಸರಿಗೆ ಡಿನೋಟಿಫೈ ಮಾಡುವುದು ಅಪರಾಧ ಅಲ್ಲವೇ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಯವರು ಕೃಷ್ಣ ಬೈರೇಗೌಡ ಅವರನ್ನು ಹೆಬ್ಬೆಟ್ಟು ಎಂದು ಜರಿದಿದ್ದರು.
ಕುಮಾರಸ್ವಾಮಿಯವರ ನಿಂದನೆಗೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ರಾಜಕಾರಣದಲ್ಲಿ ವೈಯಕ್ತಿಕ ದಾಳಿ ನಡೆಸುವುದು ನಿಂದಿಸುವುದು ಕುಮಾರಸ್ವಾಮಿಯವರಿಗೆ ಸಾಮಾನ್ಯ ಸಂಗತಿಯಾಗಿದೆ. ಆದರೆ, ನಮ್ಮದು ಅಂತಹ ಸಂಸ್ಕೃತಿಯಲ್ಲ. ನಾವು ಅಂತಹ ಸಂಸ್ಕೃತಿಗೆ ಎಂದಿಗೂ ಜೋತು ಬೀಳುವುದಿಲ್ಲ. ಅಲ್ಲದೆ, ಇಂತಹ ನಿಂದನೆಗಳು ವೈಯಕ್ತಿಕ ದಾಳಿಗಳಿಗೆ ನಾವು ಬಗ್ಗುವವರೂ ಅಲ್ಲ ಎಂದರು.
ಈಗಲೂ ನಾನು ಅದೇ ಪ್ರಶ್ನೆಯನ್ನು ಮುಂದಿಡುತ್ತೇನೆ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಈ ಜಮೀನಿನ ಡಿನೋಟಿಫೈ ಗೆ ಅತ್ಯುತ್ಸಾಹ ತೋರಿದ್ದು ಏಕೆ? ಇವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡದ್ದು ಸುಳ್ಳೇ? ಅಂತಿಮವಾಗಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಈ ಬಗ್ಗೆ ಕುಮಾರಸ್ವಾಮಿಯವರ ಸ್ಪಷ್ಟನೆ ನೀಡಲಿ ಸಾಕು ಎಂದು ಸವಾಲೆಸೆದರು.




