ಬೆಂಗಳೂರು: ಕುಮಾರಸ್ವಾಮಿಯವರಂತೆ ವೈಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಡಿ ನೋಟಿಫಿಕೇಷನ್ ಮಾಡಲು ಮುಂದಾಗಿದ್ದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅದೇ ಜಮೀನನ್ನು ಸತ್ತವರ ಹೆಸರಿಗೆ ಡಿನೋಟಿಫೈ ಮಾಡಲಾಗಿತ್ತು. ಕೊನೆಗೆ ಈ ಜಮೀನು ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿಯಾಗಿತ್ತು ಎಂದು ಈ ಹಿಂದೆ ಕೃಷ್ಣ ಬೈರೇಗೌಡ ಆರೋಪಿಸಿದ್ದರು. ಈ ಪ್ರಕರಣವನ್ನು ಉಲ್ಲೇಖಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸತ್ತವರ ಹೆಸರಿಗೆ ಡಿನೋಟಿಫೈ ಮಾಡುವುದು ಅಪರಾಧ ಅಲ್ಲವೇ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಯವರು ಕೃಷ್ಣ ಬೈರೇಗೌಡ ಅವರನ್ನು ಹೆಬ್ಬೆಟ್ಟು ಎಂದು ಜರಿದಿದ್ದರು.
ಕುಮಾರಸ್ವಾಮಿಯವರ ನಿಂದನೆಗೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ರಾಜಕಾರಣದಲ್ಲಿ ವೈಯಕ್ತಿಕ ದಾಳಿ ನಡೆಸುವುದು ನಿಂದಿಸುವುದು ಕುಮಾರಸ್ವಾಮಿಯವರಿಗೆ ಸಾಮಾನ್ಯ ಸಂಗತಿಯಾಗಿದೆ. ಆದರೆ, ನಮ್ಮದು ಅಂತಹ ಸಂಸ್ಕೃತಿಯಲ್ಲ. ನಾವು ಅಂತಹ ಸಂಸ್ಕೃತಿಗೆ ಎಂದಿಗೂ ಜೋತು ಬೀಳುವುದಿಲ್ಲ. ಅಲ್ಲದೆ, ಇಂತಹ ನಿಂದನೆಗಳು ವೈಯಕ್ತಿಕ ದಾಳಿಗಳಿಗೆ ನಾವು ಬಗ್ಗುವವರೂ ಅಲ್ಲ ಎಂದರು.
ಈಗಲೂ ನಾನು ಅದೇ ಪ್ರಶ್ನೆಯನ್ನು ಮುಂದಿಡುತ್ತೇನೆ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಈ ಜಮೀನಿನ ಡಿನೋಟಿಫೈ ಗೆ ಅತ್ಯುತ್ಸಾಹ ತೋರಿದ್ದು ಏಕೆ? ಇವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡದ್ದು ಸುಳ್ಳೇ? ಅಂತಿಮವಾಗಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಈ ಬಗ್ಗೆ ಕುಮಾರಸ್ವಾಮಿಯವರ ಸ್ಪಷ್ಟನೆ ನೀಡಲಿ ಸಾಕು ಎಂದು ಸವಾಲೆಸೆದರು.




