ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವ @INCKarnataka ಸರ್ಕಾರ, ಕೆಪಿಸಿಸಿ ವಕ್ತಾರ ಶ್ರೀ @RameshBabuKPCC ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಾಮಚಂದ್ರಪ್ಪ ಅವರುಗಳನ್ನ ಸಮಿತಿಯಲ್ಲಿ ನೇಮಕ ಮಾಡಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸಿಎಂ @siddaramaiah ನವರೇ, ಜಾಹೀರಾತುಗಳನ್ನ ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ?
ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು.
ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.
ಈ ನಡೆಯ ಹಿಂದೆ ಮಾಧ್ಯಮಗಳನ್ನ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ?
– ಆರ್, ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




