ಬೆಂಗಳೂರು: ಪಂಚಾಯತ್ ಸದಸ್ಯ ಸ್ಥಾನದಿಂದ AICC ಅಧ್ಯಕ್ಷ ಸ್ಥಾನದವರೆಗೆ ಏರಿದ ರಾಜ್ಯದ ಒಬ್ಬ ಧೀಮಂತ ನಾಯಕ ಖರ್ಗೆಯವರನ್ನು ಟಾರ್ಗೆಟ್ ಮಾಡಿ ಅವರ ತೇಜೋವಧೆ ಮಾಡುವುದು ಬಿಜೆಪಿ-ಆರ್.ಎಸ್.ಎಸ್. ಹುನ್ನಾರ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಛಲವಾದಿ ನಾರಾಯಣ ಸ್ವಾಮಿಯವರ ವಿರುದ್ಧದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಎಂ.ಬಿ.ಪಾಟೀಲ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲೇ ಪ್ರತಿಕ್ರಿಯೆ ನೀಡಿರುವ ಎಂ ಬಿ ಪಾಟೀಲ, ಛಲವಾದಿ ನಾರಾಯಣಸ್ವಾಮಿಯವರು ಕೇವಲ ಕೈಗೊಂಬೆ. ಅವರದೇ ಇತಿಹಾಸ ಈ ರೀತಿ ಇದೆ ಎಂದು ತಿಳಿಯದೆ ಈ ಹುನ್ನಾರದಲ್ಲಿ ಭಾಗಿಯಾಗಿ ಅವರೇ ಈಗ ಹರಕೆಯ ಕುರಿಯಾಗಿದ್ದಾರೆ ಎಂದಿದ್ದಾರೆ.
ಲಿಂಗಾಯತರನ್ನೂ ಒಳಗೊಂಡಂತೆ ಹಿಂದುಳಿದವರನ್ನು ಬಳಸಿ ಬಿಸಾಡುವ ಬಿಜೆಪಿಯವರ ಸಂಸ್ಕೃತಿ ಎಲ್ಲರಿಗೂ ತಿಳಿದಿದೆ. ಒಬ್ಬ ಹಿಂದುಳಿದ ಸಮುದಾಯದ ನಾಯಕನ ಏಳಿಗೆ ಸಹಿಸದೆ ಅವರದ್ದೇ ಸಮುದಾಯವರನ್ನು ಬಳಸಿಕೊಂಡು ತೇಜೋವಧೆ ಮಾಡಿಸುವ ಮೂಲಕ, ಸಮುದಾಯದ ನಾಯಕರಲ್ಲಿ ವೈಷಮ್ಯ ಮೂಡಿಸುವುದೇ ಇವರ ಅಜೆಂಡಾ ಎಂದಿದ್ದಾರೆ.
ಖರ್ಗೆಯವರನ್ನು ಟಾರ್ಗೆಟ್ ಮಾಡಿದ್ದಕ್ಕೆ ಹಾಗೂ ಛಲವಾದಿ ನಾರಾಯಣಸ್ವಾಮಿಯವರನ್ನು ಹರಕೆಯ ಕುರಿ ಮಾಡಿದ್ದಕ್ಕೆ ಬಿಜೆಪಿ-ಆರ್.ಎಸ್.ಎಸ್. ಬಹಿರಂಗವಾಗಿ ಪರಿಶಿಷ್ಟ ಜಾತಿ ಸಮುದಾಯದವರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.




