ಗೃಹಸಚಿವರ ಆಪ್ತ ಎಂ.ಸಿ.ವೇಣುಗೋಪಾಲ್ ನಿವಾಸದ ಮೇಲೆ ಐಟಿ ದಾಳಿ

2 years ago

ಬೆಂಗಳೂರು: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಕಾಂಗ್ರೆಸ್ ನಾಯಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕ ಹಾಗೂ ಗೃಹ ಸಚಿವ ಪರಮೇಶ್ವರ್ ಅವರ ಆಪ್ತ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ನಿವಾಸದ ಮೇಲೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆದಾಯ ತೆರಿಗೆ ಪಾವತಿಸದ ಆರೋಪದಡಿ ಈ ದಾಳಿ ನಡೆಸಲಾಗಿದೆ.

ಮೂರು ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ನೀಡದ ಅಧಿಕಾರಿಗಳು, ಅಲ್ಲಿಗೇ ಉಪಾಹಾರ ತರಿಸಿಕೊಂಡು ಕೆಲಸ ಮುಂದುವರಿಸಿದರು.

ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳ ಕಾರ್ಯಾಚರಣೆಗೆ ಸಹಕರಿಸಿದ್ದಾರೆ ಎನ್ನಲಾಗಿದೆ.

Leave a Reply