ಭುವನೇಶ್ವರ: 75ನೇ ಸಂವಿಧಾನದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಪ್ರದರ್ಶಿಸಲಾದ ಸಂವಿಧಾನದ ಪೀಠಿಕೆಯಿಂದ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಎಂಬ ಎರಡು ಪ್ರಮುಖ ಪದಗಳನ್ನು ಅಳಿಸುವ ಮೂಲಕ ಬಿಜೆಪಿ ಸರ್ಕಾರ ತಪ್ಪು ಮಾಡಿದೆ ಎಂದು ವಿಪಕ್ಷ ನಾಯಕ ಮತ್ತು ಮಾಜಿ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಾತ್ಯತೀತ, ಸಮಾಜವಾದಿ ಎರಡು ಪದಗಳು ಭಾರತದ ಸಂವಿಧಾನದ ಪೀಠಿಕೆಯ ಭಾಗವಾಗಿರಬೇಕು. ಇದು ತಪ್ಪು. ಇದನ್ನು ಮಾಡಬಾರದಿತ್ತು. ಭಾರತ ಜಾತ್ಯತೀತ ರಾಷ್ಟ್ರವಾಗಿದೆ ಎಂದರು.
ವಿಧಾನಸಭೆಯಲ್ಲಿ ಬಿಜೆಡಿ ನಾಯಕರು ಈ ವಿಷಯ ಪ್ರಸ್ತಾಪಿಸಿ, ತಪ್ಪನ್ನು ಸರಿಪಡಿಸುವಂತೆ ಕೋರಿ ಗದ್ದಲ ಸೃಷ್ಟಿಸಿದ್ದರು.
ಬಿಜೆಡಿ ನಾಯಕರ ಭಾರತದ ಸಂವಿಧಾನಕ್ಕೆ ಅವಮಾನ ಮಾಡಿದ ಆರೋಪವನ್ನು ಉಲ್ಲೇಖಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಮುಖೇಶ್ ಮಹಾಲಿಂಗ್, ಸದನದಲ್ಲಿ ಪೀಠಿಕೆಯು ದೇಶದ ಹೆಮ್ಮೆ ಮತ್ತು ವೈಭವವಾಗಿದೆ. ಸರ್ವರಿಗೂ ಪವಿತ್ರವಾಗಿರುವ ಸಂವಿಧಾನಕ್ಕೆ ರಾಜ್ಯ ಸರಕಾರ ಅಗೌರವ ತೋರಿಲ್ಲ ಎಂದರು.




