ಬೆಂಗಳೂರು: SDPI ಕರ್ನಾಟಕ ಪಕ್ಷದ ವತಿಯಿಂದ ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಜನಾಗ್ರಹ ಸಭೆ ನಡೆಯಿತು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸಭೆಗೆ ಕರ್ನಾಟಕ ಸರ್ಕಾರದ ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಹಾಗೂ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿಯ ಪ್ರತಿನಿಧಿಯಾಗಿ ಆಗಮಿಸಿ, SDPI ಬಿಡುಗಡೆಗೊಳಿಸಿದ್ದ ಜನತಾ ಬಜೆಟ್ ಆಗ್ರಹ ಪ್ರತಿಯನ್ನು ಸ್ವೀಕರಿಸಿದರು. ಅವರು ಈ ಆಗ್ರಹವನ್ನು ಸರ್ಕಾರದ ಗಮನಕ್ಕೆ ತರುತ್ತದೆ ಮತ್ತು ಮುಖ್ಯಮಂತ್ರಿಯೊಡನೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.
ಸಭೆಯ ಪ್ರಮುಖ ಉದ್ದೇಶ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಸಂದರ್ಭದಲ್ಲಿ ಸರ್ಕಾರ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಆರೋಗ್ಯ, ಶಿಕ್ಷಣ, ವಕ್ಫ್, ಮೀಸಲಾತಿ, ಜನಗಣತಿ ಹಾಗೂ ಅಭಿವೃದ್ಧಿ ವಿಚಾರಗಳಲ್ಲಿ ಬದ್ಧತೆಯನ್ನು ತೋರಬೇಕು ಎಂಬುದಾಗಿ ಆಗಿತ್ತು. ಜನಪರ ಆಗ್ರಹದೊಂದಿಗೆ, ಕಲ್ಯಾಣ ರಾಜ್ಯಕ್ಕಾಗಿ ಪ್ರಾಮಾಣಿಕವಾಗಿ ಯಾವ ಯಾವ ಇಲಾಖೆಗಳಿಗೆ ಸರಿಯಾದ ರೀತಿಯಲ್ಲಿ ಹಣ ಮೀಸಲಿಡಬೇಕು ಎಂಬ ಕುರಿತು ಸಲಹೆಗಳನ್ನು ಸರ್ಕಾರದ ಮುಂದಿಡಲಾಯಿತು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ, ಖ್ಯಾತ ಹೈಕೋರ್ಟ್ ವಕೀಲರಾದ ಎಸ್. ಬಾಲನ್, AAP ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜು, ದಲಿತ ಮೈನಾರಿಟಿ ಸೇನೆ ರಾಜ್ಯಾಧ್ಯಕ್ಷ AJ ಖಾನ್ ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.
SDPI ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಮತ್ತು ದೇವನೂರ ಪುಟ್ನಂಜಯ್ಯ, ಪ್ರಧಾನ ಕಾರ್ಯದರ್ಶಿ BR ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿಗಳಾದ ರಿಯಾಝ್ ಕಡಂಬು, ಅಫ್ಸರ್, ಅಕ್ರಮ್ ಮೌಲಾನ, ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್, ಶಾಹೀದ್ ಅಲಿ, ಅತಾವುಲ್ಲ ಜೋಕಟ್ಟೆ, ಅಡ್ವಕೇಟ್ ವಸೀಮ್, ಆಯಿಷಾ ಬೆಂಗಳೂರು, ಮಕ್ಸುದ್ ಬೆಳಗಾಂ ಹಾಗೂ ಇತರ ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರು ಹಾಜರಿದ್ದರು.
ಬೆಳಿಗ್ಗೆ 11:00 ಗಂಟೆಗೆ ಆರಂಭಗೊಂಡ ಸಭೆ ಸಂಜೆ 5:45ಕ್ಕೆ ಸಮಾರೋಪಗೊಂಡಿತು. ಈ ಕಾರ್ಯಕ್ರಮ ಜನಪರ ಬಜೆಟ್ ಆಗ್ರಹಿಸಲು ಮತ್ತು ಸರ್ಕಾರದ ಗಮನ ಸೆಳೆಯಲು ಯಶಸ್ವಿಯಾಗಿ ನೆರವೇರಿತು.




