ಸೃಷ್ಟಿಕರ್ತನ ಅನುಗ್ರಹದಿಂದ ಹಾಗೂ ಗುರು ಹಿರಿಯರ ಅಪಾರ ಆಶೀರ್ವಾದದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನು ಸಲ್ಲಿಸಿದ್ದ ನಾಮಪತ್ರ ಅಧಿಕೃತವಾಗಿ ಅಂಗೀಕರಿಸಲಾಗಿದೆ ಎಂಬುದು ನನಗೆ ಅಪಾರ ಸಂತೋಷ ಮತ್ತು ಜವಾಬ್ದಾರಿಯ ಭಾವನೆ ನೀಡುತ್ತಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಇದು ದಾವಣಗೆರೆ ದಕ್ಷಿಣದ ಜನರ ನಂಬಿಕೆ, ಶೋಷಿತ ವರ್ಗಗಳ ಆಶೆಗಳು ಮತ್ತು ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮತ್ತೊಂದು ಮಹತ್ವದ ಹೆಜ್ಜೆ.
ನಾಮಪತ್ರ ಸಲ್ಲಿಸಿದ ದಿನದಿಂದಲೂ ಜನರು ತೋರಿಸುತ್ತಿರುವ ಪ್ರೀತಿ, ಬೆಂಬಲ ಮತ್ತು ವಿಶ್ವಾಸ ನನ್ನಲ್ಲಿ ಮತ್ತಷ್ಟು ಉತ್ಸಾಹ ಮತ್ತು ಬದ್ಧತೆಯನ್ನು ತುಂಬಿದೆ. ರಾಜ್ಯದ ವಿವಿಧ ಭಾಗಗಳಿಂದ ನಾಯಕರು, ಕಾರ್ಯಕರ್ತರು, ಸ್ನೇಹಿತರು ಮತ್ತು ಹಿತೈಷಿಗಳು ನೀಡುತ್ತಿರುವ ಬೆಂಬಲವು ಈ ಹೋರಾಟವು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಲ್ಲ, ಇದು ಸಮಾನತೆ ಮತ್ತು ಸ್ವಾಭಿಮಾನದ ಹೋರಾಟ ಎಂಬುದನ್ನು ಸ್ಪಷ್ಟಪಡಿಸಿದೆ.
ನಾನು ದಮನಿತರ ಧ್ವನಿಯಾಗಿ, ಶೋಷಿತರ ಹಕ್ಕಿನ ಹೋರಾಟಗಾರನಾಗಿ, ಅಹಿಂದ ವರ್ಗಗಳ ಆಶಾಕಿರಣವಾಗಿ ಈ ಹೋರಾಟಕ್ಕೆ ಕಾಲಿಟ್ಟಿದ್ದೇನೆ.
ನಿಮ್ಮ ಪ್ರಾರ್ಥನೆ, ಬೆಂಬಲ ಮತ್ತು ಸಹಕಾರವೇ ನನ್ನ ಶಕ್ತಿ. ಬನ್ನಿ, ನಾವು ಒಟ್ಟಾಗಿ ದಾವಣಗೆರೆ ದಕ್ಷಿಣದಲ್ಲಿ ಹೊಸ ಇತಿಹಾಸ ನಿರ್ಮಿಸೋಣ.
– ಅಪ್ಸರ್ ಕೊಡ್ಲಿಪೇಟೆ




