ಸುಸ್ಥಿತಿಗೆ ಮರಳಿದ ಅಂಗನವಾಡಿ ಕೇಂದ್ರಗಳು
ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ ಜುಲೈ 22 ರಂದು ಆಜಾದ್ ನಗದರಲ್ಲಿನ ವೆಂಕಾಭೋವಿ ಕಾಲೋನಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ಸ್ಥಿತಿಗತಿ ಬಗ್ಗೆ ಗಮನ ಸೆಳೆದಿದ್ದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಭೇಟಿ ನೀಡಿದ ಪರಿಣಾಮವಾಗಿ ಅಂಗನವಾಡಿಯಲ್ಲಿ ಸ್ವಚ್ಚತೆ, ಮಕ್ಕಳನ್ನು ಮಲಗಿಸಲು ಸೊಳ್ಳೆ ಪರದೆ, ಸರ್ಕಾರದ ಮೆನು ಪ್ರಕಾರ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರ ವಿತರಣೆ ಸೇರಿದಂತೆ ಸಾಕಷ್ಟು ಬದಲಾವಣೆಯನ್ನು ಕಾಣಲಾಗಿದೆ. ಇಲಾಖೆ ಮೇಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮಕ್ಕಳಿಗೆ ಅತ್ಯುತ್ತಮವಾದ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಮಕ್ಕಳಿಗೆ ಆಟಿಕೆಗಳ ಉಪಯೋಗ, ಕೇಂದ್ರದ ಒಳಗೆ ಮಕ್ಕಳ ಕಲಿಕೆಗೆ ಬೇಕಾದ ಸ್ಟಿಕ್ಕರ್ಗಳ ಬಳಕೆ ಸೇರಿದಂತೆ ಆಹಾರ ಪದಾರ್ಥಗಳ ದಾಸ್ತಾನು ವಿವರದ ಪ್ರದರ್ಶನ, ಮೆನು ಫಲಕಗಳೆಲ್ಲವನ್ನು ಪ್ರದರ್ಶನ ಮಾಡಲಾಗಿದೆ.
ಈ ಬಗ್ಗೆ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ್ ಪ್ರತಿಕ್ರಿಯಿಸಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಸಮಯದಲ್ಲಿದ್ದ ಸ್ಥಿತಿಗೂ, ಈಗಿನ ಸ್ಥಿತಿಗೂ ಸಾಕಷ್ಟು ಸುಧಾರಣೆಯಾಗಿದ್ದು ಇದೇ ರೀತಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಮಕ್ಕಳಿಗೆ ಅತ್ಯುತ್ತಮವಾದ ಸೌಲಭ್ಯಗಳು ಸಿಗುವಂತಾಗಲಿ ಎಂದು ತಿಳಿಸಿದ್ದಾರೆ.




