ಬೆಂಗಳೂರು: ಕರ್ನಾಟಕದಲ್ಲಿನ ಅಂಗಡಿ ಮುಂಗಟ್ಟು ಮತ್ತು ವಾಣಿಜ್ಯ ಕಟ್ಟಡಗಳ ಮೇಲೆ ಪ್ರಧಾನವಾಗಿ ಕಾಣುವಂತೆ ಕನ್ನಡದಲ್ಲೇ ನಾಮಫಲಕ ಹಾಕುವ ಕಾಯಿದೆ ಪಾಲಿಸದವರ ವಿರುದ್ಧ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ. ನೂತನ ಕಾಯಿದೆ ಅನ್ವಯ ನಾಮಫಲಕ ಹಾಕದ ಅಂಗಡಿ ಮುಂಗಟ್ಟು ಮತ್ತು ವಾಣಿಜ್ಯ ಸಂಕೀರ್ಣಗಳನ್ನು ಸೀಸ್ ಮಾಡಬಾರದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆ ಬಳಿಕ ಆದೇಶ ಅನುಸರಿಸದವರ ಮೇಲೆ ಕ್ರಮ ಕೈಗೊಳ್ಳಲು ಆರಂಭಿಸಿತ್ತು. ಹೀಗಾಗಿ “ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022” ಅನ್ನು ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹೈಕೋರ್ಟ್ ಮೆಟ್ಟಿಲೇರಿತ್ತು.
ಟೈಟನ್ ಕಂಪನಿ ಲಿಮಿಟೆಡ್ ಹಾಗೂ ಪಿವಿರ್ ಐನಾಕ್ಸ್ ಲಿಮಿಟೆಡ್ ಮತ್ತಿತರ ಕಂಪನಿಗಳು ಕೂಡ ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.
ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯವಾಗಿ ಬಳಸದೇ ಇದ್ದರೆ ಬಲವಂತ ಕ್ರಮ ತೆಗೆದುಕೊಳ್ಳುವಂತಿಲ್ಲ. ಅಂತಹ ವಾಣಿಜ್ಯ ಮಳಿಗೆಯನ್ನು ಸೀಲ್ಡ್ ಡೌನ್ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.


