ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣ ಇತ್ಯರ್ಥಗೊಂಡಿದ್ದು ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ ಹೀಗಿರುವಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಕರ್ನಾಟಕದ ಬಸ್ ಸಂಚಾರ ಸುಗಮವಾಗಿದ್ದು ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಈ ಹಂತದಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ. ಈ ಬಗ್ಗೆ ಕನ್ನಡ ಪರ ಸಂಘಟನೆಗಳ ಜೊತೆ ಮಾತನಾಡುವುದಾಗಿ ಹೇಳಿದರು.
ಕರ್ನಾಟಕದ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಹಲ್ಲೆಯಾದ ಘಟನೆ ನಡೆದು 8 ದಿನ ಆಗಿದೆ. ಆರಂಭದಲ್ಲಿ ಒಂದೆರೆಡು ದಿನ ಪ್ರತಿಭಟನೆಗಳಾಗಿದ್ದವು. ಯಾವುದೇ ಹಾನಿಯಾಗಿಲ್ಲ. ಮಹಾರಾಷ್ಟ್ರದಲ್ಲೂ ನಮ್ಮ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಮಸಿ ಬಳಿದಿದ್ದರು. ಅದಕ್ಕೂ ಪ್ರತಿಭಟನೆಗಳು ನಡೆದಿವೆ ಎಂದರು.
ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟಗಳಿಗೆ ನಮ್ಮ ಬೆಂಬಲವಿದೆ. ಆದರೆ ಈ ಸಂದರ್ಭದಲ್ಲಿ ಬಂದ್ ಅಗತ್ಯವಿಲ್ಲ ಎಂದರು.




