ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕಂದಾಯ ನಿವೇಶನದಂತಹ ಅನಧಿಕೃತ ಆಸ್ತಿಗಳಿಗೆ ಪ್ರತ್ಯೇಕ ಖಾತೆ ನೀಡಿ ದಂಡ ವಿಧಿಸಿ ತೆರಿಗೆ ವ್ಯಾಪ್ತಿಗೆ ತರಲು ಅವಕಾಶ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2025 ಅನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವ್ಯಾಪ್ತಿಯ ಆಸ್ತಿಗಳು ನಕ್ಷೆ ಮಂಜೂರಾತಿ ಪಡೆಯದೆ ಕಂದಾಯ ನಿವೇಶನದಲ್ಲಿ ಮತ್ತು ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ಬಿ ರಿಜಿಸ್ಟರ್ ನಡಿ ಇ-ಖಾತಾ ನೀಡಲು ತೀರ್ಮಾನಿಸಲಾಗಿತ್ತು. ಇದೇ ಮಾದರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಖಾತೆ ನೀಡಿ ತೆರಿಗೆ ವ್ಯಾಪ್ತಿಗೆ ತರಲು ವಿಧೇಯಕದಲ್ಲಿ 199 ಬಿ ಮತ್ತು 199 ಸಿಗೆ ತಿದ್ದುಪಡಿ ತರಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಕಂದಾಯ ನಿವೇಶನಗಳಿಗೆ ಇ-ಖಾತೆ ನೀಡಲು ಸರ್ಕಾರ ಅವಕಾಶ ನೀಡಲಿದೆ.
ಉದ್ದೇಶಿತ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಅಧಿನಿಯಮ -2025 ಕ್ಕೆ ರಾಜ್ಯಪಾಲರು ಅಂಗೀಕಾರ ನೀಡಿದ್ದಾರೆ. ಈ ಮೂಲಕ ನಗರ, ಪಟ್ಟಣ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಜಾರಿಗೆ ಬಂದಿರುವ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ಸ್ವರೂಪದ ಇ- ಖಾತೆ ನೀಡುವ ವ್ಯವಸ್ಥೆ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗಲಿದೆ.
ಗ್ರಾಮೀಣ ಪ್ರದೇಶದ ಅನಧಿಕೃತ ನಿವೇಶನ ಕಟ್ಟಡ ಬಡಾವಣೆಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಅದರ ಮಾಲೀಕರಿಗೆ ನೆಮ್ಮದಿ ನೀಡುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ. ಅನಧಿಕೃತ ನಿವೇಶನ ಮತ್ತು ಬಡಾವಣೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತೆರಿಗೆ ರೂಪದಲ್ಲಿ ಆರ್ಥಿಕ ಬಲವರ್ಧನೆಗೆ ಅನುಕೂಲವಾಗಲಿದೆ.




