ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ರೌಡಿಗಳ ರಾಜ್ಯವಾಗಿದೆ ಕರ್ನಾಟಕ
ಸಿಎಂ Siddaramaiah ನವರೇ, ಬಂಧನವಾಗಿ ಪೊಲೀಸ್ ವಶದಲ್ಲಿರುವ ಒಬ್ಬ ಪರಿಷತ್ ಸದಸ್ಯನಿಗೆ ತಮ್ಮ ಸರ್ಕಾರ ರಕ್ಷಣೆ ಕೊಡಲು ಆಗುತ್ತಿಲ್ಲ ಅಂದಮೇಲೆ ನಿಮ್ಮ ಸರ್ಕಾರವನ್ನು ರೌಡಿಗಳು, ಗೂಂಡಾಗಳು ಹೈಜಾಕ್ ಮಾಡಿರಬೇಕು ಅಥವಾ ಸರ್ಕಾರದ ಭಾಗವಾಗಿರುವವರೇ ರೌಡಿಗಳು, ಗೂಂಡಾಗಳಾಗಿರಬೇಕು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿಗಳು ಯಾವುದೇ ಕಾನೂನು ಕ್ರಮವಿಲ್ಲದೆ ಹೊರಗಿದ್ದಾರೆ. ಆ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಂಡು, ಸುದ್ದಿ ಬಿತ್ತರಿಸಿದ ಮಾಧ್ಯಮಗಳ ಮೇಲೆ ಹೌಹಾರಿದವರು ಇನ್ನೂ ರಾಜಾರೋಷವಾಗಿ ಮಂತ್ರಿಗಳಾಗಿ ಗೂಟದ ಕಾರಿನಲ್ಲಿ ಓಡಾಡುತ್ತಿದ್ದಾರೆ.
ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (ಎಸ್ಡಿಎ) ರುದ್ರೇಶ್ ಯಾದವಣ್ಣನವರ್ ಅವರ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ವಿರುದ್ಧ ದೂರಿದೆ. ಆ ತನಿಖೆ ಎಲ್ಲಿವರೆಗೆ ಬಂತು. ಎಷ್ಟು ಜನರ ಬಂಧನವಾಗಿದೆ?
ನಾಚಿಕೆ ಆಗಬೇಕು ಈ ಗೂಂಡಾಗಳ, ರೌಡಿಗಳ ಕಾಂಗ್ರೆಸ್ ಸರ್ಕಾರಕ್ಕೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




