ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಬಾಡಿಗೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡುವ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕವನ್ನು ಮೇಲ್ಮನೆಯಲ್ಲಿ ಡಿ.17ರಂದು ಅಂಗೀಕರಿಸಲಾಯಿತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಾಡಿಗೆ ಹೆಸರಿನಲ್ಲಿ ಕೆಲ ಕಡೆಗಳಲ್ಲಿ ಆಘಾತಕಾರಿ ಪ್ರಕರಣಗಳು ದಾಖಲಾಗುತ್ತಿವೆ. ಆದ್ದರಿಂದ ದುರುಪಯೋಗಕ್ಕೆ ಅವಕಾಶವಿಲ್ಲದ ಹಾಗೆ ಎಚ್ಚರ ವಹಿಸಿ ಈ ಕಾಯಿದೆಯನ್ನು ತಿದ್ದುಪಡಿ ಮಾಡಬೇಕಿದೆ ಎಂದು ಸದಸ್ಯರಾದ ನವೀನ ಕೆ.ಎಸ್., ಐವನ್ ಡಿ’ಸೋಜಾ, ರಮೇಶಬಾಬು ಹಾಗೂ ಇನ್ನೀತರರು ಸಲಹೆ ಮಾಡಿದರು.
ತಪ್ಪಿತಸ್ಥರನ್ನು ದಂಡದ ಮೂಲಕ ಶಿಕ್ಷೆಗೆ ಗುರಿಪಡಿಸುವುದು, ದಂಡದ ಮೊತ್ತ ಹೆಚ್ಚಳ ಮಾಡುವುದು ಕಾಯಿದೆಯ ತಿದ್ದುಪಡಿ ಹಿಂದಿನ ಉದ್ದೇಶವಾಗಿದೆ. ಮೂಲ ಕಾಯಿದೆಯಲ್ಲಿನ ಮಹತ್ವದ ಅಂಶಗಳನ್ನು ತಿದ್ದುಪಡಿ ಮಾಡಿಲ್ಲ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿ, ಮಸೂದೆಯ ಅಂಗೀಕಾರಕ್ಕೆ ಕೋರಿದರು.
ಸಭಾಪತಿಯವರು, ವಿಧೇಯಕವನ್ನು ಅಂಗೀಕರಿಸಲು ಧ್ವನಿಮತಕ್ಕೆ ಹಾಕಿದರು. ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.




