ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಉದ್ಯಮಿ ಕೆ.ಎನ್. ಶಾಂತಕುಮಾರ್ ಅವರಿಗೆ ರಾಜ್ಯ ಹೈಕೋರ್ಟ್ ನಲ್ಲಿ ಗೆಲುವು ಲಭಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಇನ್ನೂರು ರೂಪಾಯಿ ಹಿಂಬಾಕಿ ಪಾವತಿಸಿಲ್ಲ ಎಂಬ ಕಾರಣಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷ ಹುದ್ದೆಗೆ ಸಲ್ಲಿಸಿದ ನಾಮಪತ್ರವನ್ನು ಪುರಸ್ಕರಿಸಲು ಸೂಚಿಸಿರುವ ಕೋರ್ಟ್ ನಿಗದಿಯಂತೆ ಚುನಾವಣೆ ನಡೆಸಲು ಆದೇಶಿಸಿದೆ.
ಚಂದಾ ಹಣ ಪಾವತಿಸಿಲ್ಲ ಎಂಬ ಕಾರಣ ನೀಡಿ ತಮ್ಮ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಕೆ.ಎನ್.ಶಾಂತಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಪ್ರಕಟಿಸಿದೆ.
ಕೆಎಸ್ಸಿಎ ಚುನಾವಣೆಯಲ್ಲಿಚುನಾವಣೆಗೆ ಈಗಾಲೇ ನೀಡಿರುವ ವೇಳಾಪಟ್ಟಿಯಂತೆ ಡಿ.7 ರಂದೇ ಮತದಾನ ನಡೆಸಲು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.
ಕೆ.ಎನ್.ಶಾಂತಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ-ವಿವಾದವನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಿದೆ.
ಆದರೆ ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಕೋರ್ಟ್ ಈ ಆದೇಶವನ್ನು ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ.
ಮುಂದಿನ ತಿಂಗಳ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನ್ಕಕೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು. ಆದರೆ, ಚುನಾವಣೆಗೂ ಮುನ್ನವೇ ವೆಂಕಟೇಶ್ ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಾಮಪತ್ರ ತಿರಸ್ಕರಿಸಿದ್ದೇಕೆ?: ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯ ಚುನಾವಣೆಗೆ ನಾಮಪತ್ರ ಪರಿಶೀಲನೆ ವೇಳೆ ಕೆ.ಎನ್.ಶಾಂತಕುಮಾರ್ ಹಿಂಬಾಕಿಯಿದ್ದ 200 ರೂ. ಚಂದಾ ಹಣ ಪಾವತಿಸಿರುವ ರಶೀದಿಯನ್ನು ಹಾಜರುಪಡಿಸಿಲ್ಲ ಎಂದು ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಈ ಕಾರಣಕ್ಕೆ ಕೆ.ಎನ್.ಶಾಂತಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಈ ವೇಳೆ ಕೆ.ಎನ್.ಶಾಂತಕುಮಾರ್ ಪರ ವಕೀಲರು ವಾದಿಸಿದ್ದು, ಪರಿಶೀಲನೆ ವೇಳೆಗೆ ಅರ್ಜಿದಾರರು ಹಿಂಬಾಕಿಯಿದ್ದ 200 ರೂ. ಚಂದಾ ಹಣ ಪಾವತಿಸಿರುವ ರಶೀದಿಯನ್ನು ನೀಡಿದ್ದರು. ಒಂದು ವೇಳೆ ನೀಡಿಲ್ಲ ಎಂದರೆ ಅದನ್ನು ಮೊದಲೇ ತಿಳಿಸಬೇಕಿತ್ತು ಎಂದು ಹೇಳಿದ್ದಾರೆ.
ಕೆಎಸ್ಸಿಎ ಪರ ವಕೀಲರು ಈ ಬಗ್ಗೆ ಪ್ರತಿವಾದ ಮಂಡಿಸಿದ್ದಾರೆ. ಹಿಂಬಾಕಿಯಿದ್ದ 200 ರೂ. ಪಾವತಿಸಿದ್ದರೆ ಅದರ ರಶೀದಿಯನ್ನು ನೀಡಬೇಕಿತ್ತು. ಯಾಕೆ ನೀಡಿಲ್ಲ ಎಂದು ಹೇಳಿದ್ದಾರೆ. ಕೆಎಸ್ಸಿಎ ಹಿಂಬಾಕಿ ಪಾವತಿಸದಿದ್ದರೂ ಪ್ರಜಾವಾಣಿ-ಡೆಕ್ಕನ್ ಹೆರಾಲ್ಡ್ ಕ್ಲಬ್ಗೆ ಟೂರ್ನಿಯಲ್ಲಿ ಭಾಗವಹಿಸಲು ಅನುಮತಿಸಲಾಗಿತ್ತು. ಹಿಂಬಾಕಿ ಪಾವತಿ ಮಾಡದಿದ್ದವರ ಪಟ್ಟಿಯನ್ನು ಕೆಎಸ್ಸಿಎ ಸಿದ್ಧಪಡಿಸಬೇಕಿತ್ತು. ಅದನ್ನು ಮಾಡದಿರುವುದು ನಮ್ಮ (ಕೆಎಸ್ಸಿಎ) ತಪ್ಪು ಎಂದು ಹೇಳಿದ್ದಾರೆ.




