ಬೆಂಗಳೂರು: ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ ತನ್ನ ಪಟಾಲಂ ಮೂಲಕ ಸೂಚನೆ ನೀಡಿರುವ @Tejasvi_Surya ವಿರುದ್ಧ @ceo_karnataka ಅವರು ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಒತ್ತಾಯಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಂಗಳೂರು ದಕ್ಷಿಣ ಲೋಕಸಭೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ವಾಟ್ಸಪ್ ಮೂಲಕ ಸಂದೇಶ ಕಳಿಸಲಾಗಿತ್ತು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಭಾಗವಹಿಸುವಂತೆ ಬೆದರಿಕೆ ಹಾಕುತ್ತಿರುವುದು ಚುನಾವಣಾ ನಿಯಮಗಳಿಗೆ ಹಾಗೂ ಕಾನೂನಿಗೆ ವಿರುದ್ಧವಾಗಿದೆ ಎಂದಿದೆ.

ಟಿ ಶರ್ಟ್ ಹಂಚಿಕೆಯ ವಿರುದ್ಧವೂ ಕ್ರಮ ಜರುಗಿಸಿ ಪಾರದರ್ಶಕ ಚುನಾವಣೆಗೆ ಪಕ್ಷಪಾತವಿಲ್ಲದ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿಂದೆ ನೀತಿ ಸಂಹಿತೆಗೆ ವಿರುದ್ಧವಾಗಿ ನಗರತ್ ಪೇಟೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ಯಾವುದೇ ಕಠಿಣ ಕ್ರಮ ಜರುಗಿಸದಿರುವುದು ಜನರಲ್ಲಿ ಆಯೋಗದ ಕಾರ್ಯಕ್ಷಮತೆಯ ಬಗ್ಗೆ ಅನುಮಾನ ಮೂಡಲು ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.







