ಧಾರವಾಡ: ಗಾಂಧೀಜಿ ಅವರ ತತ್ವದಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೀವನ ಸವೆಸಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಾಂಧೀಜಿಯವರ ಅಹಿಂಸೆ ತತ್ವ ನಮಗೆ ದಾರಿದೀಪವಾಗಿದೆ. ಅದೇ ಮಾರ್ಗದಲ್ಲಿ ನಾವು ನಡೆಯಬೇಕು. ದಸರಾ ಹಬ್ಬವನ್ನು ರಾಮನು ರಾವಣನ ಮೇಲೆ ಜಯ ಸಾಧಿಸಿದ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಗಾಂಧೀಜಿಯವರ ತತ್ವದಾರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಬಹಳ ಮಹತ್ವದ್ದಾಗಿದೆ. “ಮೈ ಎಕ್ಸಪೀರಿಮೆಂಟ್ ವಿಥ್ ಟ್ರುಥ್” ಎಂಬ ಗ್ರಂಥವನ್ನು ರಚಿಸಿದ್ದಾರೆ. ಶಾಲಾ ದಿನದಲ್ಲಿ ಮಾಡಿದ ತಪ್ಪನ್ನು ಜೀವನದಲ್ಲಿ ಎಂದಿಗೂ ಮಾಡುವುದಿಲ್ಲ ಎಂದು ಶಪಥ ಮಾಡಿದ್ದರು. ತಮ್ಮ ಜೀವನದುದ್ದಕ್ಕೂ ಸತ್ಯದ ದಾರಿಯಲ್ಲಿ ಅವರು ನಡೆದರು. ಅವರಂತೆ ನಾವು ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಜೀವನದಲ್ಲಿ ತ್ಯಾಗವನ್ನು ಸಹ ಅಳವಡಿಸಿಕೊಳ್ಳಬೇಕಾಗುತ್ತದೆ. ಒಳ್ಳೆಯ ನಾಗರಿಕರಾಗಲು ಮುಂದಾಗಬೇಕು. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ನೀಡಿದರು. ಪಾಕಿಸ್ತಾನ ವಿರುದ್ಧ ಯುದ್ಧ ಸಂದರ್ಭದಲ್ಲಿ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಾವು ಸಹ ಸಮಾಜಕ್ಕೆ ಕೊಡುಗೆ ನೀಡಲು ಅಣಿಯಾಗಬೇಕು. ದೇಶದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂದರು.




