ಬೆಂಗಳೂರು: KSRTC ಬಸ್ಸುಗಳ ಪ್ರಯಾಣ ದರ ಏರಿಕೆಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎನ್ನುವುದನ್ನು ಸಾರಿಗೆ ಸಚಿವ @RLR_BTM ಅವರು ಸ್ಪಷ್ಟಪಡಿಸಿದ್ದಾರೆ ಎಂದು ಕೆಪಿಸಿಸಿ ಹೇಳಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷ ರಾಜು ಕಾಗೆಯವರ ಹೇಳಿಕೆಯನ್ನು ಉಲ್ಲೇಖಿಸಿ ವರದಿಯಾಗಿರುವ ಸುದ್ದಿಸಂಸ್ಥೆಯ ವರದಿಯೊಂದನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬೆಲೆ ಏರಿಕೆಯ ಆರೋಪವನ್ನು ಹೊರಿಸಿತ್ತು. ಜನರ ಜೇಬಿಗೆ ಕನ್ನ ಹಾಕುವುದೇ ಕಾಂಗ್ರೆಸ್ ಸರ್ಕಾರದ ಆಡಳಿತದ ಧ್ಯೇಯ!! ಎಂದಿತ್ತು.
ಅಲ್ಲದೇ, ಈಗಾಗಲೇ ಹಾಲು-ತರಕಾರಿ-ದಿನಸಿ ಬೆಲೆಯೇರಿಸಿರುವ ಕಾಂಗ್ರೆಸ್ ಸರ್ಕಾರ, ಈಗ ಬಸ್ ಪ್ರಯಾಣದ ದರವನ್ನು ಶೇ.15 ರಿಂದ 20ರಷ್ಟನ್ನು ಹೆಚ್ಚಿಸಲು ಚಿಂತಿಸಿರುವುದು ಕನ್ನಡಿಗರಿಗೆ ಬೆಲೆಯೇರಿಕೆಯ ಗಾಯದ ಮೇಲೆ ಬರೆ ಎಳೆಯುವುದಕ್ಕೆ ಸಮ ಎಂದು ಬಿಜೆಪಿ ಹೇಳಿತ್ತು.
ಜನ ವಿರೋಧಿ ಸಿಎಂ ಸಿದ್ದರಾಮಯ್ಯನವರೇ, ಜನಾಕ್ರೋಶದ ನಡುವೆಯೂ ಬಸ್ ದರವನ್ನು ಹೆಚ್ಚಿಸಿದರೆ, ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಚ್ಚರ ಎಂದು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದು, #PickPocketSarkara #CongressLootsKarnataka ಹ್ಯಾಷ್ ಟ್ಯಾಗ್ ಬಳಸಿ ಅಸಮಾಧಾನ ವ್ಯಕ್ತಪಡಿಸಿತ್ತು.
ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲೇ ತಿರುಗೇಟು ನೀಡಿರುವ ಕೆಪಿಸಿಸಿ, @BJP4Karnataka ನಾಯಕರು ಕಪೋಲಕಲ್ಪಿತ ವರದಿಗಳನ್ನು ಇಟ್ಟುಕೊಂಡು ಸುಳ್ಳು ಹಬ್ಬಿಸುವುದನ್ನು ಬಿಟ್ಟು, ಕಳೆದ 10 ವರ್ಷದಲ್ಲಿ ವಾಹನ ಬಿಡಿಭಾಗಗಳ ಬೆಲೆ ಏರಿಕೆಯಾಗಿದ್ದರ ಬಗ್ಗೆ, ಇಂಧನ ತೈಲಗಳ ಬೆಲೆ ಏರಿಕೆಯ ಬಗ್ಗೆ, ರೈಲು ಪ್ರಯಾಣ ದರ ಏರಿಕೆಯ ಬಗ್ಗೆ ಉತ್ತರ ನೀಡಲಿ ಎಂದು ಸವಾಲೊಡ್ಡಿದೆ.
ಕೇಂದ್ರ ಸರ್ಕಾರದ ಬೆಲೆ ಏರಿಕೆಯ ನೀತಿಯಿಂದಾಗಿ ರಾಜ್ಯ ಸರ್ಕಾರಗಳ ಮೇಲೆ ಅನಿವಾರ್ಯ ಹೊರೆ ಆಗಿರುವ ಬಗ್ಗೆ ಜನತೆಗೆ ಉತ್ತರಿಸಲಿ ಎಂದು ಸವಾಲೆಸೆದಿದೆ.




