ಬಳ್ಳಾರಿ: ದೇವರು ನೀಡಿದ ಅದ್ಭುತ ಕೊಡುಗೆಯಂದರೆ ಒಬ್ಬರ ರಕ್ತವನ್ನು ಇನ್ನೊಬ್ಬರಿಗೆ ದೇಹದಲ್ಲಿ ಸೇರಿಸುವುದು, ಇಂತಹ ಪುಣ್ಯದ ಕಾರ್ಯ ಮಾಡುವ ಮನಸ್ಸು ಪ್ರತಿಯೊಬ್ಬರಿಗೂ ಬರಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಹೇಳಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿದಿನ ಅಪಘಾತಗಳಿಂದ ಗಾಯಗೊಂಡವರಿಗೆ ಹಾಗೂ ರಕ್ತಹೀನತೆಯಿಂದ ಬಳಲುವ ಗರ್ಭಿಣಿಯರಿಗೆ, ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ಮತ್ತು ದಂತ ಕಾಯಿಲೆಯಿಂದ ಬಳಲುತ್ತಿರುವವರಿಗೆ ನಿರಂತರವಾಗಿ ರಕ್ತದ ಅವಶ್ಯಕತೆ ಇದ್ದು, ಈ ಹಿನ್ನೆಲೆಯಲ್ಲಿ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಗೆ ನಿರಂತರವಾಗಿ ಸಹಕಾರಿಯಾಗುವ ಅಂಶದ ಹಿನ್ನೆಲೆಯಲ್ಲಿ 18 ವರ್ಷ ತುಂಬಿದ ಆರೋಗ್ಯವಂತ ಪುರುಷರು ಮೂರು ತಿಂಗಳಿಗೊಮ್ಮೆ, ಮಹಿಳೆ ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ ಮಾತನಾಡಿ, ಯಾವುದೆ ಬೇಧ-ಭಾವ, ಸಂಕೋಚಗಳಿಲ್ಲದೆ, ಜಾತಿ ಧರ್ಮವನ್ನು ಮೀರಿ ಬದುಕಿರುವಾಗ ದಾನ ಮಾಡಬಹುದಾದ ವಸ್ತು ರಕ್ತವಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲ ಪುರುಷ ಮತ್ತು ಮಹಿಳೆ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ರಕ್ತದ ಕೊರತೆ ನೀಗಿಸಿ ಜೀವ ಉಳಿಸುವ ಕಾರ್ಯಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.
ದಾನಿಗಳಿಗೆ ಸನ್ಮಾನ: ಇದೇ ಸಂದರ್ಭದಲ್ಲಿ 25 ಹೆಚ್ಚು ಬಾರಿ ರಕ್ತದಾನ ಮಾಡಿದ ಮಹನಿಯರಿಗೆ ಸನ್ಮಾನಿಸಲಾಯಿತು.
ಓಂಪ್ರಕಾಶ-100 ಬಾರಿ, ಮಂಜುನಾಥ.ಬಿ-50 ಬಾರಿ, ಜೆ-ನಿತ್ಯಾನಂದ-31 ಬಾರಿ, ಪುರುಷೋತ್ತಮ.ಎಮ್-30 ಬಾರಿ, ರವಿ ಚೆಳ್ಳಗುರ್ಕಿ-29 ಬಾರಿ, ಬಿ.ಆಶೀಶ್-25 ಬಾರಿ, ನಾಗರಾಜ್-25 ಬಾರಿ ರಕ್ತದಾನ ಮಾಡಿ ಪ್ರಶಸ್ತಿ ಸ್ವೀಕರಿಸಿರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ, ಪೆಥಾಲಜಿಸ್ಟ್ ಡಾ.ಉದಯಶಂಕರ, ಜಿಲ್ಲಾ ಮೇಲ್ವಿಚಾರಕ ಗಿರೀಶ್, ವಿರುಪಾಕ್ಷಪ್ಪ, ಹೊನ್ನುರಪ್ಪ, ಶಿವರಾಮ್, ಮಂಜುನಾಥ ಹಾಗೂ ಐಸಿಟಿಸಿ ಸಿಬ್ಬಂದಿ ಸೇರಿದಂತೆ ವಿಮುಕ್ತಿ ಸೌಖ್ಯಬೆಳಕು, ನಿತ್ಯಜೀವನ ಸಂಸ್ಥೆಗಳ ಕಾರ್ಯಕರ್ತೆಯರು ಹಾಜರಿದ್ದರು.




