ಭವ್ಯ ಭಾರತ ನಿರ್ಮಾಣ ಮಾಡೋಣ: ಎಂ.ರಾಮಚಂದ್ರ
ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ ಸೇವಾದಳ ಸಂಸ್ಥಾಪಕ ಡಾ.ನಾ.ಸು.ಹರ್ಡೀಕರ್ ರವರ 136ನೇ ಜನ್ಮದಿನಾಚರಣೆ ಆಯೋಜಿಸಲಾಗಿತ್ತು.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಮಹಾತ್ಮ ಗಾಂಧೀಜೀ ಮತ್ತು ನಾ.ಸು.ಹರ್ಡೀಕರ್ ರವರ ಭಾವಚಿತ್ರಕ್ಕೆ ಕೆಪಿಸಿಸಿ ಸೇವಾದಳ ಅಧ್ಯಕ್ಷ ಎಂ.ರಾಮಚಂದ್ರರವರು ಪುಷ್ಪನಮನ ಸಲ್ಲಿಸಿದರು.

ರಾಜ್ಯ ಸೇವಾದಳದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ಸಿಹಿ ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಂ.ರಾಮಚಂದ್ರ, ಸೇವಾದಳ ಸಂಸ್ಥಪಕರಾದ ನಾ.ಸು.ಹರ್ಡೀಕರ್ ರವರು ಶಿಸ್ತ್ರು, ಸೇವಾ ಮನೋಭಾವನೆಯಿಂದ ಸೇವಾದಳದಲ್ಲಿ ಜನಸೇವೆ ಮಾಡಬೇಕು ಎಂದು ಕಲಿಸಿಕೊಟ್ಟರು ಎಂದರು.

ಕೆಪಿಸಿಸಿ ರಾಜ್ಯ ಸೇವಾದಳ ವಿಭಾಗ ರಾಜ್ಯಾದ್ಯಂತ ಉತ್ತಮ ಸಂಘಟನೆ ಮಾಡಿದೆ ಮತ್ತು ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೇವಾದಳದ ಕಾರ್ಯಕರ್ತರು ಜನರ ನಡುವೆ ಉತ್ತಮ ಬಾಂಧವ್ಯದಲ್ಲಿ ಸರ್ಕಾರದ ಯೋಜನೆಗಳು ತಲುಪಿಸುವಂತೆ ಮಾಡಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷರು, ರಾಷ್ಟ್ರಿಯ ಅಧ್ಯಕ್ಷರ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಘಟಪ್ರಭದಲ್ಲಿ ರಾಜ್ಯ ಸಮಾವೇಶ ಮಾಡಲಾಗುವುದು. ಸೇವಾದಳ ಸಂಸ್ಥಾಪಕ ನಾ.ಸು.ಹರ್ಡೀಕರ್ ಅವರ ಆದರ್ಶ, ಸಿದ್ದಾಂತಗಳನ್ನು ಎಲ್ಲರೂ ಆಳವಡಿಸಿಕೊಂಡು ದೇಶದ ಅಭಿವೃದ್ದಿಗೆ ಶ್ರಮಿಸೋಣ ಎಂದು ಕರೆ ನೀಡಿದರು.




