ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏಪ್ರಿಲ್ 15 ರಂದು 8 ಅಭ್ಯರ್ಥಿ ಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಕಾಂಗ್ರೆಸ್ ಪಕ್ಷದಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಯಿಂದ ಜಿ.ಎಸ್.ಗಾಯಿತ್ರಿ, ಬಿ ಎಸ್ ಪಿಯಿಂದ ಹನುಮಂತಪ್ಪ, ಸಮಾಜ ವಿಕಾಸ ಕ್ರಾಂತಿ ಪಕ್ಷದಿಂದ ಕೆ.ಹೆಚ್.ರುದ್ರೇಶ್, ಪಕ್ಷೇತರರಾಗಿ ಸುಭಾನ್ ಖಾನ್, ಟಿ.ಜಬೀನ್ ತಾಜ್, ಸಿ.ಎಂ.ಮಂಜುನಾಥಸ್ವಾಮಿ, ಕೆ.ಜಿ.ಅಜ್ಜಪ್ಪ ಇವರು ನಾಮಪತ್ರ ಸಲ್ಲಿಸಿದ್ದಾರೆ.
ಏ.12 ರಂದು 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದುವರೆಗೆ 12 ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.


