ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏಪ್ರಿಲ್ 15 ರಂದು 8 ಅಭ್ಯರ್ಥಿ ಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
ಕಾಂಗ್ರೆಸ್ ಪಕ್ಷದಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಯಿಂದ ಜಿ.ಎಸ್.ಗಾಯಿತ್ರಿ, ಬಿ ಎಸ್ ಪಿಯಿಂದ ಹನುಮಂತಪ್ಪ, ಸಮಾಜ ವಿಕಾಸ ಕ್ರಾಂತಿ ಪಕ್ಷದಿಂದ ಕೆ.ಹೆಚ್.ರುದ್ರೇಶ್, ಪಕ್ಷೇತರರಾಗಿ ಸುಭಾನ್ ಖಾನ್, ಟಿ.ಜಬೀನ್ ತಾಜ್, ಸಿ.ಎಂ.ಮಂಜುನಾಥಸ್ವಾಮಿ, ಕೆ.ಜಿ.ಅಜ್ಜಪ್ಪ ಇವರು ನಾಮಪತ್ರ ಸಲ್ಲಿಸಿದ್ದಾರೆ.
ಏ.12 ರಂದು 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದುವರೆಗೆ 12 ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.




