ಬಳ್ಳಾರಿ: ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 5 ರವರೆಗೆ ನಡೆದ 5ನೇ ಆವೃತ್ತಿಯ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಲೋಕೇಶ್ ರಾಥೋಡ್ (ಜಿ.ಬಿ.ಆರ್. ಕಾಲೇಜು ಹೂವಿನಹಡಗಲಿ) ಡೆಕಾಥ್ಲಾನ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ಮೂರನೇ ಸ್ಥಾನ ಪಡೆದಿದ್ದಾರೆ.
- ಕಾವೇರಿ ವಿಚಾರವಾಗಿ ವಿಪಕ್ಷಗಳ ನಾಯಕ ವಿಶ್ವಾಸದ ಬಳಿಕ ಮುಂದಿನ ತೀರ್ಮಾನ: ಡಿ.ಕೆ.ಶಿವಕುಮಾರ್
- ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಯ್ದೆ ಕಾನೂನುಗಳು ಚರ್ಚಿತವಾಗಬೇಕು: ಡಾ.ಎಚ್.ಸಿ.ಮಹದೇವಪ್ಪ
- ನೀಟ್ NEET ಹೋರಾಟದ ನಡುವೆ ವೈರಲ್ ಆದ ರಾಹುಲ್ ಗಾಂಧಿ, ದೀಪ್ಕೆ, ಗ್ರೆಟಾ, ಸೊರೊಸ್ ಫೋಟೋ!
- ಸಾವಯವ ರೈತರನ್ನು ಬೆಂಬಲಿಸಲು ಸಾವಯವ ಸಂತೆಯಲ್ಲಿ ಪಾಲ್ಗೊಳ್ಳಿ: ದರ್ಶನ್ ಪುಟ್ಟಣ್ಣಯ್ಯ
- ಕನಿಷ್ಠ ವೇತನ ಕೂಡಲೇ ಜಾರಿಗೊಳಿಸದಿದ್ದರೆ ತೀವ್ರ ಪ್ರತಿರೋಧ: ಜೆ ಬಾಲಕೃಷ್ಣ ಶೆಟ್ಟಿ
ಇವರ ಸಾಧನೆಗೆ ಮತ್ತು ತಂಡದ ವ್ಯವಸ್ಥಾಪಕ ಮಲ್ಲಿಕಾರ್ಜುನ.ವೈ ಮತ್ತು ತರಬೇತುದಾರ ಬಡೇಸಾಬ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿ, ಕುಲಸಚಿವ (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಶುಭ ಕೋರಿದ್ದಾರೆ.




