ಬೆಂಗಳೂರು: ಆದಾಯ ತೆರಿಗೆ ಹಾಗೂ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಾಲ್ವರು ಪ್ರೊಪೆಸರ್ ಒಬ್ಬರ ಮನೆಗೆ ಪರಿಶೀಲನೆ ನಡೆಸುವ ನೆಪದಲ್ಲಿ ನುಗ್ಗಿದ ಅಪರಿಚಿತರು 1.50 ಕೋಟಿ ನಗದು, 50 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಸುಳಿವನ್ನು ಯಲಹಂಕ ಪೊಲೀಸರ ವಿಶೇಷ ತಂಡಗಳು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಕಳೆದ ಸೆ.16 ರಂದು ಮಧ್ಯಾಹ್ನ ಸಿಂಧಿ ಕಾಲೇಜು ಪ್ರೋಪೆಸರ್ ಗಿರಿರಾಜ್ ಅವರ ಯಲಹಂಕದ ಮನೆಗೆ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ನಕಲಿ ನಂಬರ್ ಪ್ಲೇಟ್ ಹಾಕಿದ್ದ ಕಾರಿನಲ್ಲಿ ಸೂಟು ಬೂಟು ಹಾಕಿಕೊಂಡು ಬಂದಿದ್ದಾರೆ.
ಮನೆಯಲ್ಲಿದ್ದ ಪತ್ನಿ ಹಾಗೂ ತಂದೆ ತಾಯಿಗೆ ನಾವು ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಪರಿಶೀಲನೆ ಮಾಡುವ ನೆಪಮಾಡಿ ಬಳಿಕ ನಿಮ್ಮ ಮನೆಯಲ್ಲಿ ಹಣ ಇದೆ ಎಂದು ಮನೆಯವರನ್ನು ಕೇಳಿದ್ದಾರೆ. ಹಣ ಎಲ್ಲಿದೆ ಎಂದು ಪ್ರಶ್ನಿಸಿ ಗದರಿದಾಗ ಅಡುಗೆ ಮನೆಯಲ್ಲಿಟ್ಟಿದ್ದ ಹಣವನ್ನು ಖದೀಮರು ತೆಗೆದುಕೊಂಡಿದ್ದರು.
ಮನೆಯವರ ಬಳಿ ಗಿರಿರಾಜು ಎಲ್ಲಿದ್ದಾರೆ ಎಂದು ಕೇಳಿದ್ದರು. ಅವರು ಇಲ್ಲ ಎಂದಾಗ ಮನೆಯಲ್ಲಿದ್ದ 1.50 ಕೋಟಿ ಹಣವಿದ್ದ ಬ್ಯಾಗ್, 50 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕೆಲ ಸಮಯದ ಬಳಿಕ ಕೆಲಸ ಮುಗಿಸಿಕೊಂಡು ಕಾಲೇಜಿನಿಂದ ಗಿರಿರಾಜ್ ಅವರು ಮನೆಗೆ ಬಂದಾಗ ವಿಷಯ ತಿಳಿದು ವಂಚನೆಗೊಳಗಾಗಿರುವುದು ಗೊತ್ತಾಗಿ ಯಲಹಂಕ ಪೊಲೀಸರಿಗೆ ದೂರು ನೀಡಿದ್ದಾರೆ.
ಜಮೀನು ಖರೀದಿಸಲು 1.50 ಕೋಟಿ ನಗದನ್ನು ಮನೆಗೆ ತಂದಿಟ್ಟಿಕೊಂಡಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದು,ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಪಿ ಸಜೀತ್ ಅವರು ರಚಿಸಿದ ವಿಶೇಷ ತಂಡಗಳು ಸಿಸಿ ಟಿವಿ ಕ್ಯಾಮರಾಗಳ ದೃಶ್ಯವನ್ನು ತಪಾಸಣೆ ನಡೆಸಿ ದುಷ್ಕರ್ಮಿಗಳ ಸುಳಿವು ಪತ್ತೆಹಚ್ಚಿ ನೆರೆಯ ಆಂಧ್ರಪ್ರದೇಶಕ್ಕೆ ತೆರಳಿ ಬಂಧನ ಕಾರ್ಯಾಚರಣೆ ಕೈಗೊಂಡಿದ್ದಾರೆ.




