ಬಹು ವರ್ಷಗಳ ಕನಸಿನ ಹಸಿರುಮಕ್ಕಿಯ ಬ್ರಿಡ್ಜ್ ನನಸು
ಶಿವಮೊಗ್ಗ: ಮಲೆನಾಡಿನಿಂದ ಕರಾವಳಿ ಭಾಗಕ್ಕೆ ಸಂಪರ್ಕಿಸುವ ಸಾಗರ ತಾಲ್ಲೂಕಿನ ಹಸಿರುಮಕ್ಕಿಯ ಶರಾವತಿ ಮುಳುಗಡೆ ಹಿನ್ನೀರ ಕಡವಿನಲ್ಲಿ ನಿರ್ಮಾಣ ಹಂತದಲ್ಲಿರುವ “ಹಸಿರುಮಕ್ಕಿ ಸೇತುವೆ” ಕಾಮಗಾರಿ ಪ್ರದೇಶಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರೊಂದಿಗೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದರು. ಇದೇ ವೇಳೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಹಸಿರು ಮಕ್ಕಿ ಸೇತುವೆ ಸುಮಾರು 1155 ಮೀ. ಉದ್ದ ಹಾಗೂ 8.5 ಮೀ. ಅಗಲದಾಗಿದ್ದು, ಸನ್ಮಾನ್ಯ ಮಾಜಿ ಸಭಾಪತಿಗಳಾದ ಕಾಗೋಡು ತಿಮ್ಮಪ್ಪನವರ ಕನಸು ಹಾಗೂ ಪರಿಶ್ರಮದ ಫಲದಿಂದಾಗಿ ಸೇತುವೆ ಕಾಮಗಾರಿಯನ್ನು ಮಂಜೂರು ಮಾಡಿಸಿದ್ದರು.
ಹಸಿರುಮಕ್ಕಿ ಸೇತುವೆ ಸಂಚಾರಕ್ಕೆ ಮುಕ್ತವಾದರೆ ಸಾಗರ ತಾಲೂಕಿನಿಂದ ಉಡುಪಿ, ಮಂಗಳೂರು, ಕುಂದಾಪುರ, ಭಟ್ಕಳ ಹಾಗೂ ಕೊಲ್ಲೂರು ಕ್ಷೇತ್ರಗಳಿಗೆ ಕಡಿಮೆ ಅವಧಿಯಲ್ಲಿಯೇ ತಲುಪಲು ಸಹಕಾರಿಯಾಗಲಿದೆ.
ಈ ವೇಳೆ ಜನಪ್ರತಿನಿಧಿಗಳು, ಪಕ್ಷದ ಮುಖಂಡರುಗಳು, ಮಹಿಳಾ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.




