ಬೆಂಗಳೂರು ನಗರ ಅಭಿವೃದ್ಧಿ ಮತ್ತು ಬಿಬಿಎಂಪಿ ಅಧಿಕಾರಿ, ನೌಕರರ ಹಿತರಕ್ಷಣೆಗಾಗಿ ವಿಶೇಷಪೂಜೆ
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೌಕರರ ಸಂಘದ ಎದುರು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶಿವನಾ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಶೇಷ ಪೂಜೆ, ಶಿವಮಂತ್ರ ಪಠಣ ಮತ್ತು ಅಧಿಕಾರಿ, ನೌಕರರಿಂದ ಭಕ್ತಿ ಗೀತೆ ಗಾಯನ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ಶಿವನ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎ.ಅಮೃತ್ ರಾಜ್, ಎಲ್ಲವನ್ನು ಕರುಣಿಸುವ ಮತ್ತು ಬೇಡಿದ ವರ ನೀಡುವ ದೇವರು, ಶಿವ ನಾಮ ಸ್ಮರಣೆಯಿಂದ ಬಂದ ಸಂಕಷ್ಟಗಳು ದೂರವಾಗಿ ಜೀವನದಲ್ಲಿ ಸುಖ, ಶಾಂತಿ ನೆಮ್ಮದ್ದಿ ಲಭಿಸುತ್ತದೆ ಶಿವ ದೇವರ ಅರಾಧನೆಯಿಂದ. ಶಿವ ಒಲಿದರೆ ಭಯವಿಲ್ಲ ಎಂದರೆ ಪ್ರತಿ ದಿನವು ಶಿವನಾಮ ಸ್ಮರಣೆಯಿಂದ ಕಾರ್ಯ ಮಾಡಿದರೆ ಯಾವುದೇ ಅಡಚಣೆ ಬರುವುದಿಲ್ಲ. ನಮ್ಮ ಸಂಘದ ವತಿಯಿಂದ ಮಹಾಶಿವರಾತ್ರಿ ಹಬ್ಬ ಅಚರಿಸಲಾಗುತ್ತಿದೆ ಎಂದರು.
ಬೆಂಗಳೂರು ನಗರ ಇಂದು ವಿಶ್ವದ 10 ಸುಂದರ ನಗರಗಳಲ್ಲಿ ಒಂದು ಎಂಬ ಕೀರ್ತಿ ಗಳಿಸಿದೆ ಇದಕ್ಕೆ ಕಾರಣ ಜನಪ್ರತಿನಿಧಿಗಳ ಜೊತೆಯಲ್ಲಿ ಬಿಬಿಎಂಪಿ ಅಧಿಕಾರಿಗಳ, ನೌಕರರು ಹಗಲಿರುಳು ದುಡಿದ ಶ್ರಮ ಕಾರಣ. ಅಧಿಕಾರಿಗಳು, ನೌಕರರು ಸತತ ಕೆಲಸದ ಒತ್ತಡದಿಂದ ಮಾನಸಿಕ, ದೈಹಿಕವಾಗಿ ಕುಗ್ಗಿಹೋಗುತ್ತಿದ್ದಾರೆ ಎಂದರು.
ಬಿಬಿಎಂಪಿಯಲ್ಲಿ ಕಂದಾಯ, ಆರೋಗ್ಯ ಮತ್ತು ಇಂಜನಿಯರ್ ವಿಭಾಗಗಳಲ್ಲಿ ಅಧಿಕಾರಿ ಮತ್ತು ನೌಕರರ ವಿವಿಧ ಬೇಡಿಕೆಗಳು ಸರ್ಕಾರ ಮತ್ತು ಮುಖ್ಯ ಆಯುಕ್ತರು ಗಮನಕ್ಕೆ ಮತ್ತು ಮನವಿ ಸಲ್ಲಿಸಲಾಗಿದೆ ಎಂದರು.
ಬೆಂಗಳೂರು ನಗರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಮತ್ತು ಬಿಬಿಎಂಪಿ ಅಧಿಕಾರಿಗಳ, ನೌಕರರ ಬೇಡಿಕೆಗಳು ಈಡೇರಬೇಕು, ಒತ್ತಡದ ಕೆಲಸ ನಿವಾರಣೆಯಾಗಬೇಕು ಎಂದು ಶಿವನಿಗೆ ವಿಶೇಷ ಪೂಜೆ ಸಲ್ಲಿಸುತ್ತಲಾಗುತ್ತಿದೆ ಎಂದರು.
ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಬಾಬಣ್ಣ, ಡಾ.ಶೋಭಾ, ಡಿ.ರಾಮಚಂದ್ರ, ಕೆ.ಜಿ.ರವಿ, ರುದ್ರೇಶ್ ಬಿ., ಎಲ್.ಆರ್.ಮಂಜುನಾಥ್,ಸೋಮಶೇಖರ್ ಎನ್.ಎಸ್., ಹೆಚ್.ಕೆ.ತಿಪ್ಪೇಶ್, ಹರೀಶ್ ಹೆಚ್.ಬಿ., ನರಸಿಂಹ, ಮಂಜೇಗೌಡ, ಆರ್.ರೇಣುಕಾಂಬ,ಎಸ್.ಜಿ.ಸುರೇಶ್, ಮಂಜುನಾಥ್, ಸಂತೋಷ್ ಕುಮಾರ್ ನಾಯ್ಕ, ಶ್ರೀಧರ್, ಸಂತೋಷ್ ಕುಮಾರ್ ಮೊದಲಾದವರು ಹಾಜರಿದ್ದರು.








