ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕರ್ನಾಟಕದಲ್ಲಿನ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರಿಗೆ ತಿರುಗೇಟು ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ ಎಂದರು.
ಚುನಾವಣೆ ಮುಗಿದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯಲಿದ್ದು, ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್, ಎನ್ ಸಿ ಪಿ ಮತ್ತು ಶಿವಸೇನಾ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದರು.
ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿ ಅವರು ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದರು. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ. ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ. ಈ ಕಾರಣಕ್ಕೆ ಅವರು ಹೆದರಿದ್ದಾರೆ ಎಂದರು.
ಕರ್ನಾಟಕದಲ್ಲಿ ಶಿಂಧೆ ತರದವರು ತರದವರು ಯಾರು ಇಲ್ಲ. ನಮಗೆ ಯಾರ ಭಯವೂ ಇಲ್ಲ. ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ ಎಂದರು.




