ಕೊಡಿಗೇಹಳ್ಳಿ ಶಾಲೆಯಲ್ಲಿ ಅತ್ಯಾಧುನಿಕ 26 ಕೊಠಡಿ ಉದ್ಘಾಟನೆ
ಕಳೆದ 15 ವರ್ಷದಲ್ಲಿ 43 ಶಾಲಾ ಕೊಠಡಿಗಳ ಉದ್ಘಾಟಣೆ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 70 ಕೋಟಿ ಯೋಜನೆಯೂ ಘೋಷಣೆ
ಬ್ಯಾಟರಾಯನಪುರದಲ್ಲಿ ಮುಂದುವರೆದ ಸರ್ಕಾರಿ ಶಾಲೆಗಳ ಮೇಲ್ದರ್ಜೆ ಅಭಿಯಾನ
ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಭಾಗಿ
ಬೆಂಗಳೂರು: ದುಡಿಯುವ ವರ್ಗದ ಬಡ-ಮಧ್ಯಮ ಕುಟುಂಬದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಲು, ಸ್ವಂತ ಕಾಲಿನಲ್ಲಿ ನಿಲ್ಲುವಂತೆ ಮಾರ್ಗದರ್ಶನ ಮಾಡುವುದು ದೇವರ ಪೂಜೆಗಿಂತಲೂ ಶ್ರೇಷ್ಠ ಕೆಲಸ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ಕ್ಷೇತ್ರ ಕೋಡಿಗೆಹಳ್ಳಿಯ ಬೆಂಗಳೂರು ಪಬ್ಲಿಕ್ ಶಾಲೆಯಲ್ಲಿ ಇಂದು 26 ನೂತನ ಮತ್ತು ಅತ್ಯಾಧುನಿಕ ಶಾಲಾ ಕೊಠಡಿಯನ್ನು ಲೋಕಾರ್ಪಣೆ ಮಾಡಲಾಯಿತು. ಅಲ್ಲದೆ, ಕೋಡಿಗೆಹಳ್ಳಿ ರೀತಿಯಲ್ಲೇ ಏಕ ಕಾಲದಲ್ಲಿ ನಗರದ ಇತರೆ ಭಾಗಗಳಲ್ಲೂ 15 ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಯಿತು.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆಕರ್ನಾಟಕದ ರಕ್ಷಣಾ ವೇದಿಕೆ ವತಿಯಿಂದ‘ಸಮಗ್ರ ಭಾಷಾ ನೀತಿ, ಸಮಗ್ರ ಭಾಷಾ ಯೋಜನೆ”ಕರ್ನಾಟಕದ ಸಾಧ್ಯತೆಗಳು- ಸವಾಲುಗಳುಒಂದು ದಿನದ ದುಂಡು ಮೇಜಿನ ಸಭೆ ಪ್ರಸ್ತಾವನೆಪ್ರಿಯರೆ,• ಭಾಷೆ ಎಂಬುದು ಮನುಕುಲವನ್ನು ಇತರೆಲ್ಲಾ ಜೀವಿಗಳಿಂದ ಭಿನ್ನವಾಗಿಸಿದ ಒಂದು ಸಾಧನ. ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ. ಅದರೊಂದಿಗೆ ಅದು ಲೋಕಜ್ಞಾನದ ವಾಹಕವೂ ಹೌದು. ಹುಟ್ಟಿದ ಮಗುವೊಂದು ತನ್ನ ಪರಿಸರದ ಭಾಷೆಯಿಂದಲೇ ಲೋಕವನ್ನು ಅರಿಯತೊಡಗುತ್ತದೆ. ಯಾವುದೇ ಭಾಷೆಯೊಂದಿಗೆ ಆ ಭಾಷಿಕ ಪರಿಸರದ ಸಂಸ್ಕೃತಿ, ಇತಿಹಾಸ, ಪರಂಪರೆ ಎಲ್ಲವೂ ಜೀವಂತ ಇರುತ್ತವೆ. ಭಾಷೆಯೊಂದು ಅಳಿದರೆ ಅದರೊಂದಿಗೆ ಆ… Read more: ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆಸಮಗ್ರ ಭಾಷಾ ನೀತಿ, ಸಮಗ್ರ ಭಾಷಾ ಯೋಜನೆ: ಕರ್ನಾಟಕದ ಸಾಧ್ಯತೆಗಳು – ಸವಾಲುಗಳು ವಿಷಯದ ಕುರಿತಾದ ದುಂಡುಮೇಜಿನ ಸಭೆ ಕರ್ನಾಟಕ ರಕ್ಷಣಾ ವೇದಿಕೆಯು ಇದೇ 14-6-2026ರಂದು ಭಾನುವಾರ ಬೆಳಿಗ್ಗೆ 10-30ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಕುಮಾರಕೃಪ ರಸ್ತೆಯಲ್ಲಿರುವ ಹೋಟೆಲ್ ಲಲಿತ್ ಅಶೋಕದಲ್ಲಿ “ಸಮಗ್ರ ಭಾಷಾ ನೀತಿ, ಸಮಗ್ರ ಭಾಷಾ ಯೋಜನೆ: ಕರ್ನಾಟಕದ ಸಾಧ್ಯತೆಗಳು – ಸವಾಲುಗಳು“ ಎಂಬ ವಿಷಯದ ಕುರಿತಾದ ದುಂಡುಮೇಜಿನ ಸಭೆಯನ್ನು ಏರ್ಪಡಿಸಿದೆ. ಕರ್ನಾಟಕದ ಅನೇಕ ಭಾಷಾತಜ್ಞರು, ಶಿಕ್ಷಣ ತಜ್ಞರು, ಚಿಂತಕರು, ಸಾಹಿತಿಗಳು, ಹೋರಾಟಗಾರರು,… Read more: ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿಬೆಂಗಳೂರು: ಸಾಂಸ್ಕೃತಿಕ ಜಗತ್ತಿನಲ್ಲಿ ಯಾವುದೇ ವ್ಯಕ್ತಿಯನ್ನು ಗುರುತಿಸಿ ಸನ್ಮಾನಿಸಿದರೆ, ಅದು ಅಂತಹ ವ್ಯಕ್ತಿ ಸೇವೆ ಸಲ್ಲಿಸಿರುವ ಸಂಸ್ಥೆಯನ್ನು, ವ್ಯಕ್ತಿ ಪ್ರತಿನಿಧಿಸುತ್ತಿರುವ ಇಡೀ ಸಂಘಟನೆಯನ್ನು ಅಥವಾ ಇಡೀ ಸಮಾಜವನ್ನೇ ಗುರುತಿಸಿದಂತೆ ಎಂದು ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ ಆರ್ ಗೋವಿಂದಸ್ವಾಮಿ ಅಭಿಪ್ರಾಯಪಟ್ಟರು. ಆನಂದರಾವ್ ವೃತ್ತದ ಬಳಿಯಿರುವ ಕವಿಮಂ ಲೆಕ್ಕಾಧಿಕಾರಿಗಳ ಸಂಘಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕವಿಮಂ ಪಿಂಚಣಿದಾರರ ಸಂಘದ ಅಧ್ಯಕ್ಷ, ನಿವೃತ್ತ ಉಪ ಲೆಕ್ಕನಿಯಂತ್ರಣಾಧಿಕಾರಿ ಬಿ… Read more: ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿವಿಶ್ವದಲ್ಲಿಯೇ ಬಹು ದೊಡ್ಡದಾದ ಭಾರತದ ಲಿಖಿತ ಸಂವಿಧಾನದ ಪೀಠಿಕೆಯು ದೇಶದ ಆತ್ಮವಿದ್ದಂತೆ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಆದಿತ್ಯ ಚಟರ್ಜಿ ಅವರು ಅಭಿಪ್ರಾಯಪಟ್ಟರು. ಸಂವಿಧಾನ ಓದು ಅಭಿಯಾನ ಕರ್ನಾಟಕ ಕ್ರೈಸ್ಟ್ ಅಕಾಡಮಿ ಆಫ್ ಲಾ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ಸಂವಿಧಾನ ಕುರಿತ ಪ್ರಬಂಧ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಂವಿಧಾನ ಏಕೆ ಓದಬೇಕು ಎಂಬ ಪ್ರಶ್ನೆಗೆ ಅವರು, ಸಂವಿಧಾನ ದೇಶದ ಸಮಸ್ತ ಪ್ರಜೆಗಳನ್ನು ಒಂದು ತೆಕ್ಕೆಗೆ ತಂದಿದೆ. ದೇಶದ ಎಲ್ಲಾ ಪ್ರಜೆಗಳೂ ಸಮಾನರರಾಗಿದ್ದಾರೆ… Read more: ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳುಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು ಹಿಂದಿ ಮೂಲ: ರಾಮ್ ಪುನಿಯಾನಿ ಕನ್ನಡಕ್ಕೆ: ಡಾ.ಪ್ರದೀಪ್ ಮಾಲ್ಗುಡಿ ಈ ವರ್ಷ ಜೂನ್ 10ರಂದು ಮೋದಿ ಅವರು ಭಾರತವನ್ನು ಸತತವಾಗಿ ಆಳಿದ ಪ್ರಧಾನಿಯಾದರು. ಅವರು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಮುರಿದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೂ ಕೆಲವು ವಾರಗಳ ಮುನ್ನವಷ್ಟೇ ಮೋದಿ ಅವರು ತಮ್ಮ ಆಡಳಿತದ 12 ವರ್ಷಗಳನ್ನು ಪೂರೈಸಿದ್ದರು. ಈ ಎರಡೂ ಸಂದರ್ಭಗಳನ್ನು ಬಿಜೆಪಿ ಪ್ರಚಾರ ವ್ಯವಸ್ಥೆ ಮೋದಿ ಅವರ ವರ್ಚಸ್ಸನ್ನು… Read more: ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಕೃಷ್ಣ ಬೈರೇಗೌಡ, ಯಶಸ್ಸಿಗಿರುವ ಏಕೈಕ ಕೀಲಿಕೈ ಶಿಕ್ಷಣ ಮಾತ್ರ. ಹೀಗಾಗಿ ದುಡಿಯುವ ಶ್ರಮಿಕ ವರ್ಗದ ಮಕ್ಕಳಿಗೂ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಲಭ್ಯವಾಗಬೇಕು. ಈ ಮಕ್ಕಳೂ ಓದಿ ನಾಳೆ ದೊಡ್ಡ ದೊಡ್ಡ ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕು. ದೊಡ್ಡ ಉದ್ಯಮಿಗಳಾಗಿ ನೂರಾರು ಜನರಿಗೆ ಉದ್ಯೋಗ ನೀಡಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಕರು ಮೌಲ್ಯಯುತ ಶಿಕ್ಷಣದ ಜೊತೆಗೆ ಮಾರ್ಗದರ್ಶನವನ್ನೂ ನೀಡಬೇಕು ಎಂದು ಶಿಕ್ಷಕರಲ್ಲಿ ಮನವಿ ಮಾಡಿದರು.
ಖಾಸಗಿ ಶಾಲೆಗಳಿಗೂ ಮೀರಿದ ಉತ್ತಮ ಸೌಲಭ್ಯಗಳನ್ನು ನಮ್ಮ ಸರ್ಕಾರಿ ಶಾಲೆಗಳಿಗೆ ನೀಡಲು ನಾವು ಬದ್ಧರಾಗಿದ್ದೇವೆ. ಕಳೆದ 15 ವರ್ಷದಲ್ಲಿ ಈ ಶಾಲೆಯಲ್ಲಿ ಮಾತ್ರ ನೂತನ 43 ಶಾಲಾ ಕೊಠಡಿಯನ್ನು ನಿರ್ಮಿಸಲಾಗಿದೆ. 2008ರಲ್ಲಿ 650 ರಷ್ಟಿದ್ದ ವಿದ್ಯಾರ್ಥಿಗಳ ಸಂಖ್ಯೆ ಪ್ರಸ್ತುತ 1150ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ, ಶಿಕ್ಷಣ ಇಲಾಖೆ ಸೇರಿದಂತೆ ಹಲವು ಮೂಲಗಳಿಂದ ಹಣ ಹೊಂದಿಸಲಾಗಿದೆ. ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಇತರೆ ಪಠ್ಯೇತರ ಸಾಂಸ್ಕೃತಿಕ ಚಟುವಟಿಕೆಗೂ ಶಾಲಾ ಆವರಣ ಅನುಕೂಲಕರವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಕ್ಷೇತ್ರದ ಜಕ್ಕೂರು, ಬಾಗಲೂರು, ಥಣೀಸಂದ್ರದಲ್ಲಿ ನೂತನ ಪಿಯು ಕಾಲೇಜುಗಳನ್ನು ನಿರ್ಮಿಸಲಾಗಿದೆ. ಕುವೆಂಪು ನಗರ, ಕಟ್ಟಿಗೇನಹಳ್ಳಿಯಲ್ಲಿ ಹೊಸ ಪದವಿ ಕಾಲೇಜುಗಳ ನಿರ್ಮಾಣಕ್ಕೆ ಪ್ರಯತ್ನ ನಡೆಯುತ್ತಿದೆ. ಶಿಕ್ಷಣಕ್ಕೆ ಸಂಬಂಧಿಸಿ ಏನೇ ಬೇಕಿದ್ರೂ ಅದನ್ನು ಪೂರೈಸಲು ನಾವು ಸಿದ್ದರಿದ್ದೇವೆ. ಆದರೆ, ಶಿಕ್ಷಕರು ಮಾತ್ರ ನಮಗೆ ಖಾಸಗಿ ಶಾಲೆಗಳನ್ನೂ ಮೀರಿಸುವ ಫಲಿತಾಂಶ ನೀಡಬೇಕು. ನಮ್ಮ ಪ್ರಯತ್ನಕ್ಕೆ ಮಕ್ಕಳ ಯಶಸ್ಸಿನ ಮುಖಾಂತರ ಪ್ರತಿಫಲ ಸಿಗುವಂತಾಗಬೇಕು. ಬಡ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕೊಟ್ಟರೆ ಮಾತ್ರ ನಾವು ಅಧಿಕಾರಕ್ಕೆ ಬಂದದ್ದಕ್ಕೂ ಸಾರ್ಥಕ ಎಂದರು.
ಸಚಿವ ಮಧು ಬಂಗಾರಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗಳಂತೆಯೇ ಉತ್ತಮ ಶಿಕ್ಷಣ ಲಭ್ಯವಾಗಬೇಕು ಎಂಬ ನಿಲುವಿನಲ್ಲಿ ನಮ್ಮ ಸರ್ಕಾರ ಗಟ್ಟಿಯಾಗಿದೆ. ಸಮಾಜದ ಎಲ್ಲಾ ವರ್ಗದ ಜನರೂ ಸಮಾನರಾಗಿ ಬದುಕಲು ಸಮಸಮಾಜ ನಿರ್ಮಿಸಲು ಶಿಕ್ಷಣವೊಂದೇ ಮಾರ್ಗ. ಹೀಗಾಗಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ ರೂ.70 ಕೋಟಿ ತೆಗೆದಿರಿಸಲಾಗಿದೆ ಎಂದರು.



