ಕಲಬುರ್ಗಿ: ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಚಿವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಂಘಟನಾತ್ಮಕವಾಗಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು ಮುಂದಿನ ಒಂದು ವಾರದೊಳಗೆ ಹಲವು ರಾಜ್ಯಗಳ ಅಧ್ಯಕ್ಷರ ಬದಲಾವಣೆ ಮಾಡಲಾಗುವುದು ಎಂದಿದ್ದಾರೆ.
ಓಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದಿನಿ. ಅಲ್ಲಿ ಹಿಂದುಳಿದ ವರ್ಗದವರು ಅಧ್ಯಕ್ಷರಾಗಿದ್ದಾರೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತವೆ. ಈ ಬಗ್ಗೆ ನಿರ್ಧಿಷ್ಟವಾಗಿ ನಾನು ಹೇಳುವುದಕ್ಕೆ ಆಗುವುದಿಲ್ಲ ಎಂದರು.
ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಇನ್ನೂ ಒಂದು ಎರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಮಾಡುತ್ತೇವೆ ಎಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದರು.
ಮಂತ್ರಿಗಳಾದ ಸತೀಶ್ ಜಾರಕಿಹೊಳಿ ಮತ್ತು ಜಿ ಪರಮೇಶ್ವರ್ ಅವರು ತಮ್ಮನ್ನು ಭೇಟಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿ, ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿದ್ದೇನೆ. ಹಾಗೆಯೇ ಕರ್ನಾಟಕ ಮೂಲದವನು. ಹೀಗಾಗಿ ಎಲ್ಲರೂ ಬಂದು ತಮ್ಮನ್ನು ಭೇಟಿಯಾಗುತ್ತಾರೆ ಇದರಲ್ಲಿ ವಿಶೇಷವೇನು ಇಲ್ಲ ಎಂದರು.
ಇದಕ್ಕೂ ಮೊದಲು ಡಿಸಿಎಂ ಡಿ ಕೆ ಶಿವಕುಮಾರ್ ನನ್ನನ್ನು ಭೇಟಿ ಮಾಡಿದ್ದರು, ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿದ್ದರು. ಇದಕ್ಕೆಲ್ಲಾ ನಿರ್ದಿಷ್ಟ ಕಾರಣಗಳನ್ನು ಹೇಳುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದರು.




