ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಗೊಂದಲಗಳನ್ನು ಪರಿಹರಿಸಲು ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ತಂಗಡಗಿ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು ರಾಜ್ಯಾದ್ಯಂತ ಸಮೀಕ್ಷೆ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಆರಂಭದಲ್ಲಿ ವಿಘ್ನ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಅಂದುಕೊಂಡಷ್ಟು ವೇಗವಾಗಿ ಸಮೀಕ್ಷೆ ಕಾರ್ಯ ನಡೆಸಲು ಅಡ್ಡಿಯಾಗಿದೆ. ಅಲ್ಲದೆ ಸಮೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತೇನೆ ಎಂದರು.
ಆನ್ಲೈನ್ ಮುಖಾಂತರ ಜನರ ಸಾಮಾಜಿಕ ಹಾಗೂ ಶೈಕ್ಷಣಿಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ವೇಳೆ ಸರ್ವರ್ ಸಮಸ್ಯೆ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುತ್ತೇನೆ. ಸಮೀಕ್ಷೆ ಸಂಬಂಧ ಉದ್ಭವವಾಗಿರುವ ಗೊಂದಲಗಳ ಬಗ್ಗೆ ಸಮಾಲೋಚಿಸಿ ಇತ್ಯರ್ಥ ಪಡಿಸಲಾಗುವುದು ಎಂದರು.
ಸಮೀಕ್ಷೆಗೆ ಸಂಬಂಧಿಸಿದಂತೆ ನನ್ನ ಮುಂದೆ ಯಾವ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಬದಲಾಗಿ ಕೆಲವರು ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಆದಷ್ಟು ಬೇಗ ಸಮೀಕ್ಷೆ ಆರಂಭಿಸಲಾಗುವುದು. ಆಯೋಗದ ಎಲ್ಲಾ ವಿಚಾರಗಳಲ್ಲಿಯೂ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದರು.




