ಬೆಂಗಳೂರು: ಜನರ ನಡುವೆ ಬೆಂಕಿ ಹಚ್ಚುವುದು, ಒಡಕು ತರುವುದೇ ಕಾಂಗ್ರೆಸ್ನ ಬ್ರ್ಯಾಂಡ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಬಿಜೆಪಿ ಕಚೇರಿಯಲ್ಲಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು ಚೂರು ಮಾಡಿ ಮಿನಿ ಪಾಕಿಸ್ತಾನ ನಿರ್ಮಿಸುವುದು ಕಾಂಗ್ರೆಸ್ನ ಉದ್ದೇಶ. ಅದಕ್ಕಾಗಿ ಮಠ ಮಂದಿರಗಳ, ರೈತರ ಜಮೀನು ಲೂಟಿ ಮಾಡಲಾಗುತ್ತಿದೆ. ಜನರ ನಡುವೆ ಬೆಂಕಿ ಹಚ್ಚುವ ಹಾಗೂ ಒಡಕು ಮೂಡಿಸುವ ಕೆಲಸವನ್ನು ಬ್ರಿಟಿಷರಿಂದ ಕಾಂಗ್ರೆಸ್ಸಿಗರು ಉಡುಗೊರೆಯಾಗಿ ಪಡೆದಿದ್ದಾರೆ. ಇಂತಹ ಕೆಲಸ ಮಾಡುವುದೇ ಅವರ ಬ್ರ್ಯಾಂಡ್ ಎಂದರು.
ಬಿಜೆಪಿ ಕಚೇರಿಯಲ್ಲಿ ನಾಲ್ಕು ಗಂಟೆಗೂ ದೀರ್ಘ ಅವಧಿಯ ಸಭೆ ನಡೆದಿದೆ. ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಉತ್ತಮವಾದ ಸದಸ್ಯತ್ವ ಅಭಿಯಾನ ಮಾಡಿದೆ. ಕಾಂಗ್ರೆಸ್ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಆದರೆ ಬಿಜೆಪಿಯಲ್ಲಿ ಸ್ಥಳೀಯ ಮಟ್ಟದಲ್ಲಿ ಚುನಾವಣೆ ನಡೆಯಲಿದೆ. ಈ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತು ಬಿಜೆಪಿಗೆ ಸದಸ್ಯರಾಗಿ ಬಂದಿದ್ದಾರೆ. ಒಟ್ಟು 74 ಲಕ್ಷ ಹೊಸ ಸದಸ್ಯರು ಪಕ್ಷಕ್ಕೆ ಬಂದಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸದಸ್ಯತ್ವ ಅಭಿಯಾನ ಪ್ರಮುಖ ಕಾರಣವಾಗಿದೆ. ಇದೇ ರೀತಿ ಮುಂದೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಸದಸ್ಯತ್ವ ಅಭಿಯಾನ ನೆರವಾಗಲಿದೆ ಎಂದರು.
ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಏನೇ ಸಮಸ್ಯೆಗಳಿದ್ದರೂ ವರಿಷ್ಠರು ಅದನ್ನು ಸರಿಪಡಿಸಲಿದ್ದಾರೆ ಎಂದರು.



