ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ದೌರ್ಜನ್ಯವೆಸಗುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಟ್ಟಪ್ಪಣೆ ಮಾಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿ ಹಾಗೂ ಸಾಲ ಕೊಟ್ಟವರ ರಕ್ಷಣೆಗೆ ಸ್ಪಷ್ಟ ನಿಯಮಾವಳಿಗಳಿವೆ. ಆದರೆ ಅವು ಸಾಲುತ್ತಿಲ್ಲ ಎಂಬ ಟೀಕೆಗಳು ಇವೆ. ಇದರ ಬಗ್ಗೆ ಕಾನೂನಿನ ತಿದ್ದುಪಡಿಯ ಪರಿಶೀಲನೆ ನಡೆಸಲಾಗುವುದು ಎಂದರು.
ಸಾಲ ಕೊಡುವಾಗ ಹಲವು ಕಡೆ ಸಹಿ ಮಾಡಲಾಗಿರುತ್ತದೆ. ಅಷ್ಟು ಸಹಿಗಳನ್ನು ಏಕೆ ಮಾಡಲಾಗಿದೆ ಎಂದು ಸಾಲ ತೆಗೆದುಕೊಳ್ಳುವವರಿಗೆ ತಿಳಿದಿರುವುದಿಲ್ಲ. ಸಾಲ ಕೊಡುವವರು ಕೆಲವು ಆಸ್ತಿಗಳನ್ನು ಅಡಮಾನ ಮಾಡಿಕೊಂಡಿರುತ್ತಾರೆ. ಅದರ ಮೇಲೆ ಮನೆಗಳ ಮೇಲೆ ದಾಳಿ ಹಾಗೂ ಜಪ್ತಿ ಮಾಡುವುದು ಮುಂತಾದ ಕ್ರಮಗಳನ್ನು ಕೈಗೊಳ್ಳುತ್ತಾರೆ. ಇದಕ್ಕೆ ಕಾನೂನು ಮೂಲಕವೇ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಅದಕ್ಕಾಗಿ ಈಗಾಗಲೇ ಕಾನೂನು ಸಚಿವರು ಅಗತ್ಯ ತಿದ್ದುಪಡಿಗೆ ಮುಂದಾಗಿದ್ದಾರೆ ಎಂದರು.
ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ನಿಂದ ಕಿರುಕುಳವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳಂತೂ ಬಂದಿವೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಮುಖ್ಯಮಂತ್ರಿಯವರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಯಾವ ರೀತಿಯ ಪ್ರಕರಣಗಳು ದಾಖಲಾಗಿವೆ, ಎಷ್ಟು ಕಿರುಕುಳ ಪ್ರಕರಣಗಳಿವೆ, ಕಾನೂನು ಬದಲಾವಣೆ ಯಾವ ರೀತಿ ಆಗಬೇಕು ಎಂಬ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.




