ಕಾಡು ಮತ್ತು ಮನುಷ್ಯನ ಸಂಬಂಧಗಳ ಬಣ್ಣಿಸುವ ಗೋವಿನ ಹಾಡು ಓದಿ, ಕೇಳಿ ಬೆಳೆದವರು ನಾವು. ಪಠ್ಯವಾಗಿಯೂ ಮತ್ತು ಕಾಡಿನ ಪರಿಚಯವಾಗಿಯೂ ಗೋವಿನ ಹಾಡು ಬೆಟ್ಟ, ಗುಡ್ಡ, ಹುಲ್ಲುಗಳನ್ನು ಪರಿಚಯಿಸಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಅರಣ್ಯ ಪ್ರದೇಶಗಳನ್ನು ಭಾರತೀಯ ಪಶುಪಾಲನಾ ಕ್ಷೇತ್ರ ಇಂದಿಗೂ ಅವಲಂಭಿಸಿರುವುದು. ಕರ್ನಾಟಕದಲ್ಲಿ ಪಶುಪಾಲನಾ ಮಾರ್ಗಗಳನ್ನು ಅರಣ್ಯಗಳ ಮೂಲಕವಾಗಿಯೇ ಗುರುತಿಸಲ್ಪಡುವ ಜಾನಪ ಭಾಷಾ ಸಾಹಿತ್ಯ ಬೆಳೆದಿದೆ. ಖಂಡ್ರೆಗೆ ಇಂತಹ ಜಾನುವಾರು ಸಾಕಾಣಿಕೆಯ ಜಾನಪದ ಸೊಬಗಿನ ಪರಿಚಯ ಇಲ್ಲದಿರಬಹುದು. ಹಾಗೆಂದು ಬದುಕಿನ ಮಾರ್ಗಗಳಿಗೆ ಬೇಲಿ ಹಾಕಲು ಸಚಿವರು ಹೊರಟಿರುವುದು ಆಕ್ಷೇಪಣೀಯ.
ಗೋಪಾಲಕರಾದ ಪಶುಪಾಲಕ ಸಮುದಾಯ ರೈತರು ಮತ್ತು ಅರಣ್ಯದ ನಡುವಿನ ಸಂಬಂಧವನ್ನು ಸಚಿವ ಖಂಡ್ರೆಯವರ ತೀರ್ಮಾನ ಹತ್ತಿಕ್ಕುತ್ತದೆ. ಖಂಡ್ರೆಯ ಸೂಚನೆಯನ್ನು ಖಂಡಿಸಿ ನಾವೂ ಹೋರಾಟಕ್ಕೆ ಮುಂದಾಗೋಣ.
ಜಾನುವಾರು ಸಾಕಾಣಿಕೆದಾರರು ಮತ್ತು ಕಾಡಿಗೂ ಇರುವ ಅವಿನಾಭಾವ ಸಂಬಂದಗಳು ನಾಡಿನ ನೆಲದಲ್ಲಿ ಕಥನಗಳಾಗಿ ಬೆಳೆದಿವೆ. ಜುಂಜಪ್ಪನನಿಂದ ಹಿಡಿದು ಮಲೆಯಮಹದೇಶ್ವರರ ಕಾವ್ಯಗಳವರೆಗೆ ಅರಣ್ಯಗಳನ್ನು ಆಧರಿಸಿ ಜನಪದರು ಕಟ್ಟಿ ಹಾಡಿದ ಕಥನಕಾವ್ಯಗಳು ನೂರಾರು. ಹುಲ್ಲು, ಸೊಪ್ಪು, ನೀರಿಗೆ ನೆರವಾದುದರ ಜೊತೆಗೆ ಹಾಡುಕಟ್ಟುವ ಭಾಷೆಯನ್ನೂ ಕಲಿಸಿಕೊಟ್ಟಿರುವಳು ಅಡವಿ ತಾಯಿ.
ಯಕ್ಕೆ ಯಲಚಿ ಲೆಕ್ಕೆ ಗಿಡಗಳು, ಸೊಕ್ಕಿ ಬೆಳೆವಾ ಸೀಗೆ ಗಿಡಗಳು, ಉಕ್ಕಿ ಬೆಳೆವಾ ನೆಲ್ಲಿ ಗಿಡಗಳು, ಆಡು ಸೋಗೆಯು, ಕಾಡು ನುಗ್ಗೆಯು, ಹೆಚ್ಚಿ ಬೆಳೆವಾ ಬಿಕ್ಕೆ ಗಿಡಗಳು ಇವುಗಳನ್ನೆಲ್ಲಾ ಉಣ್ಣಿಸದೆ ಜಾನುವಾರು ಸಾಕಾಣಿಕೆ ಮಾಡುವುದು ಅಸಾಧ್ಯ. ನಮ್ಮ ಬದುಕಿನ ಭಾಷಾ ಸೊಬಗನ್ನೇ ಹೀನಾಯಗೊಳಿಸುತ್ತದೆ ಸಚಿವರ ಸೂಚನೆ. ಖಂಡ್ರೆಯ ನಿರ್ಣಯ ಖಂಡನೀಯ.
– ಉಜ್ಜಜ್ಜಿ ರಾಜಣ್ಣ, ರಾಜ್ಯ ಉಪಾಧ್ಯಕ್ಷ, ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ



