ಬೆಂಗಳೂರು: ರಾಜ್ಯದ ಹಲವೆಡೆ ಮಳೆ, ಪ್ರವಾಹದಿಂದ ಮನೆ, ಜನಜಾನುವಾರುಗಳು ನೀರಿನಲ್ಲಿ ಮುಳುಗುತ್ತಿದ್ದರೆ, ಕಾಂಗ್ರೆಸ್ ಸರ್ಕಾರ ಮಾತ್ರ ಹಗರಣಗಳಲ್ಲಿ ಮುಳುಗಿದೆ. ಮಂತ್ರಿಗಳು ನಾಪತ್ತೆಯಾಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ಭಾರಿ ಮಳೆಯಿಂದ ಕರಾವಳಿ, ಮಲೆನಾಡು, ಬಯಲುಸೀಮೆಯ ಜಿಲ್ಲೆಗಳಲ್ಲಿ ಗುಡ್ಡ ಕುಸಿತ, ಸೇತುವೆಗಳ ಮುಳುಗಡೆ, ಮನೆಗಳ ಕುಸಿತದಿಂದ ಜೀವ ಹಾನಿಯಾಗಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಊಟ, ವಸತಿಯಿಲ್ಲದೇ ನರಕ ಅನುಭವಿಸುತ್ತಿದ್ದಾರೆ. ಆದರೆ, ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿ, ಸಾಂತ್ವನ, ಪರಿಹಾರ ಒದಗಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂದಿದೆ.
ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಮಂತ್ರಿಗಳು ತಮ್ಮ ಅಕ್ರಮಗಳನ್ನು ಮುಚ್ಚಿಕೊಳ್ಳುವಲ್ಲೇ ಬ್ಯುಸಿಯಾಗಿದ್ದು, ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನಡು ನೀರಿನಲ್ಲೇ ‘ಕೈ’ಬಿಟ್ಟಿರುವ ಸರ್ಕಾರಕ್ಕೆ ನೊಂದವರ, ನಿರಾಶ್ರಿತರ ಕಣ್ಣೀರು ಶಾಪವಾಗದೆ ಬಿಡದು’ ಎಂದಿದೆ.



