ಬೆಂಗಳೂರು: ಮಹಾನಗರ ಬೆಂಗಳೂರು ಮತ್ತು ನಗರದ ಹೊರವಲಯದಲ್ಲಿ ಕಳೆದ ಕೆಲವು ದಿನಗಳಿಂದ ದರೋಡೆ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಈ ವಿಷಯದಲ್ಲಿ ಸಾರ್ವಜನಿಕರಲ್ಲಿ ತಲೆದೋರಿದ್ದ ಭೀತಿಯನ್ನು ನಿವಾರಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಗರ ಹೊರವಲಯದ ದೊಡ್ಡಬಳ್ಳಾಪುರ ಆನೇಕಲ್ ನೆಲಮಂಗಲ ಬಿಡದಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ದರೋಡೆ ಪ್ರಕರಣಗಳು ಸಾರ್ವಜನಿಕರಲ್ಲಿ ಬಿಪಿ ಸೃಷ್ಟಿಸಿದ್ದವು ಈ ಬಗ್ಗೆ ಹಲವರು ಹಿರಿಯ ಪೊಲೀಸ್ ಅಧಿಕಾರಿಗಳ ಗಮನ ಸೆಳೆದಿದ್ದರು. ಈ ಪ್ರಕರಣಗಳ ಕುರಿತಂತೆ ಉನ್ನತ ಅಧಿಕಾರಿಗಳು ಮಧ್ಯಪ್ರವೇಶಿಸಿ ದರೋಡೆ ಪ್ರಕರಣಗಳನ್ನು ಪತ್ತೆ ಹಚ್ಚುವಂತೆ ಕಟ್ಟಪ್ಪಣೆ ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ನಿರಂತರ ಗಸ್ತು ನಡೆಸಿ, ಮೂರೇ ದಿನದಲ್ಲಿ 37 ದರೋಡೆ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದ 6 ಅಪ್ರಾಪ್ತರನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ ಈ ಗ್ಯಾಂಗ್ ರಾತ್ರಿ ಹೊತ್ತಿನಲ್ಲಿ ಮೂರು ಬೈಕ್ಗಳಲ್ಲಿ ಸುತ್ತಾಡುತ್ತ, ಮೊದಲ ದಿನ ದೊಡ್ಡಬಳ್ಳಾಪುರ, ಎರಡನೇ ದಿನ ಮಾದನಾಯಕನಹಳ್ಳಿ ಮತ್ತು ನೆಲಮಂಗಲ, ಮೂರನೇ ದಿನ ಸೂರ್ಯನಗರದಲ್ಲಿ ದರೋಡೆ ನಡೆಸಿದ್ದರು. ಹೀಗೆ ಬರೋಬ್ಬರಿ ಮೂರು ದಿನದಲ್ಲಿ 37 ಕಡೆ ಅಪ್ರಾಪ್ತರ ಗ್ಯಾಂಗ್ ದರೋಡೆ ಮಾಡಿತ್ತು. ಆರೋಪಿಗಳು ಬೈಕ್, ಕಾರು ಹಾಗೂ ಲಾರಿಗಳನ್ನು ಅಡ್ಡ ಹಾಕಿ, ಚಾಕು ತೋರಿಸಿ ಮೊಬೈಲ್, ಹಣ ಕೊಡುವಂತೆ ಬೆದರಿಕೆ ಹಾಕುತ್ತಿದ್ದರು.
ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಂತೆ, ಇದೇ ತಂಡ ಈ ಕೃತ್ಯಗಳನ್ನು ನಿರಂತರವಾಗಿ ಮಾಡುತ್ತಿದೆ ಎಂಬುದು ದೃಢಪಟ್ಟಿತು. ಗ್ರಾಮಾಂತರ ಪೊಲೀಸ್ ತಂಡ ವಿಶೇಷ ಕಾರ್ಯಾಚರಣೆಗೆ ನಿರ್ಧರಿಸಿ, ರಾತ್ರಿಯಿಡೀ ಗಸ್ತು ನಡೆಸಿ, ಬ್ಯಾಡರಹಳ್ಳಿಯಲ್ಲಿ ಆರೋಪಿಗಳನ್ನು ಬಂಧಿಸಿದೆ.
ಅಪರಾಧಿಗಳಿಂದ 9 ಮೊಬೈಲ್ ಫೋನ್ಗಳು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ಸಂಬಂಧ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಮೊದಲನೆಯ ವಿಚಾರಣೆಯಲ್ಲಿ ಓರ್ವನಿಗೆ ಹಿಂದಿನ ಅಪರಾಧ ದಾಖಲೆ ಇರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.




