ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ( ಗ್ಯಾರಂಟಿ ಯೋಜನೆಗಳನ್ನು) ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಸಕ್ತ ಅವಧಿಗಷ್ಟೇ ಅಲ್ಲ, ಮುಂದಿನ ಅವಧಿಗೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಗ್ಯಾರಂಟಿ ಯೋಜನೆಗಳನ್ನು ಅಬಾಧಿತವಾಗಿ ಮುಂದುವರೆಸಲಾಗುತ್ತದೆ ಎಂದು ಘೋಷಿಸಿದರು.
ಗ್ಯಾರೆಂಟಿಗಳು ಮುಂದುವರೆಯುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಅವರೇನು ಶಾಸ್ತ್ರ ಹೇಳುತ್ತಾರಾ ಎಂದು ಕಿಡಿ ಕಾರಿದ ಅವರು, ಈಗಷ್ಟೇ ಅಲ್ಲ ಮುಂದಿನ ಅವಧಿಗೂ ನಾವೇ ಆಯ್ಕೆಯಾಗಿ ಬರುತ್ತೇವೆ. ಆಗಲು ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದರು.



