ಬಳ್ಳಾರಿ: ಜಿಲ್ಲೆಯಲ್ಲಿ ಹೆಚ್ಐತವಿ ಸೋಂಕು ಸೇರಿದಂತೆ ಇತರೆ ರೋಗಗಳನ್ನು ಸಕಾಲದಲ್ಲಿ ಗುರ್ತಿಸಿ ಚಿಕಿತ್ಸೆ ನೀಡುವ ಸಂಚಾರಿ ಜಾಗೃತಿ ವಾಹನಕ್ಕೆ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಮೂಲಕ ಒದಗಿಸಲಾದ ಸುಸಜ್ಜಿತ ಸಂಚಾರಿ ಪ್ರಯೋಗಾಲಯ, ಆಪ್ತಸಮಾಲೋಚನೆ ಹಾಗೂ ಜನಜಾಗೃತಿ ನೀಡಲು ಎಲ್ಇ್ಡಿ ಟಿವಿ ಹೊಂದಿದ ವಾಹನಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದು, ಜಿಲ್ಲೆಗೆ ಹಸ್ತಾಂತರಿಸಲಾದ ಸುಸಜ್ಜಿತ ವಾಹನ ಗ್ರಾಮೀಣ ಪ್ರದೇಶ ಒಳಗೊಂಡಂತೆ ನಗರದ ಕೊಳಚೆ ಪ್ರದೇಶಗಳ ಜನತೆಗೆ ಹೆಚ್ಚಿನ ರೀತಿಯಲ್ಲಿ ಸದುಪಯೋಗವಾಗುವಂತೆ ನಿಗಾವಹಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮಾತನಾಡಿ, ಪ್ರಸ್ತುತ ಜಿಲ್ಲೆಗೆ ಒದಗಿಸಲಾದ ಸಂಚಾರಿ ವಾಹನದಲ್ಲಿ ಸುಸಜ್ಜಿತ ಪ್ರಯೋಗಾಲಯ ಮತ್ತು ಆಪ್ತ ಸಮಾಲೋಚನೆಯ ಪ್ರತ್ಯೇಕ ವಿಭಾಗವಿದ್ದು, ಪ್ರಯೋಗಾಲಯ ತಂತ್ರಜ್ಞರಿಗೆ ಅಗತ್ಯ ವೈದ್ಯಕೀಯ ಪರಿಕರಗಳನ್ನು ವ್ಯವಸ್ಥಿತವಾಗಿ ಕಾಯ್ದಿಟ್ಟುಕೊಳ್ಳಲು ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಸಾರ್ವಜನಿಕರಿಗೆ ವಾಹನದಲ್ಲಿ ಕುಳಿತುಕೊಳ್ಳುವ ಆಸನದ ವ್ಯವಸ್ಥೆಯಿದೆ. ಹೆಚ್ಐಎವಿ ಸೇರಿದಂತೆ ಇತರೆ ರೋಗಗಳಿಗೆ ಮತ್ತು ವೈಯಕ್ತವಾಗಿ ಕಂಡುಬರುವ ಕಾಯಿಲೆಗಳಿಗೆ ಆಪ್ತ ಸಮಲೋಚನೆ ಮೂಲಕ ಧೈರ್ಯ ತುಂಬುವ ಕಾರ್ಯವನ್ನು ಆಪ್ತ ಸಮಾಲೋಚಕರು ಮಾಡುವರು. ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ ಜನತೆಯು ಇದರ ಸೌಲಭ್ಯ ಪಡೆಯಬೇಕು ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಐಾವಿ ನಿಯಂತ್ರಣ ಚಟುವಟಿಕೆಗಳಿಗೆ ವಾಹನವನ್ನು ಬಳಸುವ ಕುರಿತು ಮಾಹಿತಿ ನೀಡಿದರು.
ಈ ವೇಳೆ ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ಅಧ್ಯಕ್ಷ ಮುಂಡರಗಿ ನಾಗರಾಜ, ಪಾಲಿಕೆಯ ಉಪಮೇಯರ್ ಡಿ.ಕುಸುಂ, ಆರೋಗ್ಯ ಶಿಕ್ಷಣ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಪದ್ಮ ರೋಜ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಸ್ಥಳೀಯ ಮುಖಂಡರಾದ ವಿವೇಕ್, ಫಯಾಜ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ,. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವಿರೇಂದ್ರ ಕುಮಾರ, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕರಾದ ಗಿರೀಶ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.




