ಬೆಳಗಾವಿ: ಕೇಂದ್ರದಲ್ಲಿ Bharatiya Janata Party (BJP) ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಗೋಕಾಕ್ ಪಟ್ಟಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್ ಪರ ಜನಬೆಂಬಲ ನಿರೀಕ್ಷೆಗೂ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019 ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದರು.
ಪ್ರಧಾನಿ Narendra Modi ಅವರು ಮಣಿಪುರದ ಹಿಂಸಾಚಾರದ ಬಗ್ಗೆ ತುಟಿ ಬಿಚ್ಚಿದ್ದಾರ? ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿದೆ? Amit Shah ಅವರು ಗೃಹ ಸಚಿವರಾಗಿ ವಿಫಲರಾದಂತೆ ಅಲ್ವಾ? ಮಣಿಪುರ ಹಿಂಸಾಚಾರಕ್ಕೆ ಮೋದಿಯವರು ಹೊಣೆಯಲ್ಲವೇ? ಎಂದು ಪ್ರಶ್ನಿಸಿದರು.
30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಮುಸ್ಲಿಂಮರ 4% ಮೀಸಲಾತಿಯನ್ನು ರದ್ದು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯ ಸುಪ್ರೀಂ ಕೋರ್ಟ್ ಗೆ ಹೋದಾಗ, 4% ಮೀಸಲಾತಿಯನ್ನು ಮುಂದುವರೆಸುವುದಾಗಿ ಅವರೇ ಮುಚ್ಚಳಿಕೆಯನ್ನು ಬರೆದುಕೊಟ್ಟಿದ್ದಾರೆ ಎಂದರು.
ಕೇವಲ ರಾಜಕಾರಣಕ್ಕಾಗಿ ಹಾಗೂ ಮತಗಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ಸುಳ್ಳು ಹೇಳುತ್ತಾರೆ ಎಂದರು.
ಕಾಂಗ್ರೆಸ್ ಪಕ್ಷ ಕಳೆದ ಐದು ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿತ್ತು, ಎಂದಾದರೂ ಮಹಿಳೆಯರ ತಾಳಿಗಳನ್ನು ಕಸಿದುಕೊಂಡಿದ್ದಾರಾ? ದೇಶದ ಜವಾಬ್ದಾರಿಯುತ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನು ನೀಡಲು ಕಾರಣ ಅವರ ಸಾಧನೆಶೂನ್ಯ ಆಡಳಿತ. ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ ಎಂದರೆ ನೀವೇ ಯೋಚಿಸಿ ಎಂದರು.




