ಬೆಂಗಳೂರು: ಮಂಗಳಸೂತ್ರ ಹಾಗೂ ಆಸ್ತಿ ಹಂಚಿಕೆ ಕುರಿತಾಗಿ ವಿವಾದಾಸ್ಪದ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ವಾಪಕ ಚರ್ಚೆಗೆ ಗ್ರಾಸ ಒದಗಿಸಿರುವ ಪ್ರಧಾನಿ ಮೋದಿ ಅವರ ಜೊತೆಗೆ ಮಾತುಕತೆ ನಡೆಸಲು ಸಿದ್ಧವಿದ್ದು ಇದಕ್ಕೆ ಅವಕಾಶ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋರಿದ್ದಾರೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಈ ಸಂಬಂಧ ಪ್ರಧಾನಿ ಮೋದಿ ಅವರಿಗೆ ಎರಡು ಪುಟಗಳ ಪತ್ರವನ್ನು ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದ ಅಂಶಗಳ ಬಗ್ಗೆ ನಿಮಗೆ ವಿವರ ನೀಡಿ ಮನವರಿಕೆ ಮಾಡಿಕೊಡಬೇಕಾಗಿದೆ. ಅದಕ್ಕಾಗಿ ಅವಕಾಶ ನೀಡಿ ಎಂದಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯಗಳ ಬಗ್ಗೆ ಸಲಹೆಗಾರರು ನಿಮಗೆ (ಪ್ರಧಾನಿ ಮೋದಿಗೆ) ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದಿರುವ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇರಿದಂತೆ ಜಾತಿ ಮತ್ತು ಸಮುದಾಯಗಳಲ್ಲಿ ಮೂಲೆ ಗುಂಪಾದವರಿಗೆ ನ್ಯಾಯ ಒದಗಿಸುವ ಗುರಿ ಹೊಂದಿದೆ ಎಂದಿದ್ದಾರೆ.
ಪುಸ್ತಕಗಳಿಂದ ಕೆಲ ಪದಗಳನ್ನು ತೆಗೆದು ಕೋಮು ವಿಭಜನೆಯಂತಹ ಹೇಳಿಕೆ ಸೃಷ್ಟಿಸುವುದು ನಿಮಗೆ ಅಭ್ಯಾಸವಾಗಿದೆ. ಈ ರೀತಿ ಮಾತನಾಡುವ ಮೂಲಕ ಪ್ರಧಾನಿ ಕುರ್ಚಿಯ ಘನತೆ ಕುಗ್ಗಿಸುತ್ತಿದ್ದೀರಿ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ನಿಮ್ಮ ಸಲಹೆಗಾರರು ನಿಮಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದ್ದರಿಂದ ಪ್ರಣಾಳಿಕೆಯನ್ನು ವಿವರಿಸಲು ನಿಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಲು ನಾನು ಬಯಸುತ್ತೇನೆ. ದೇಶದ ಪ್ರಧಾನಿಯಾಗಿದ್ದರಿಂದ ಜನರಿಗೆ ನೀವು ತಪ್ಪು ಮಾಹಿತಿ ಹಂಚಿಕೊಳ್ಳಬಾರದು ಎಂದು ಹೇಳಿದ್ದಾರೆ.
ನಿಮ್ಮ ಭಾಷಣದಿಂದ ಆಘಾತವಾಗಲಿ, ಅಚ್ಚರಿಯಾಗಲಿ ಆಗಲಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ ನಿಮ್ಮ ಪಕ್ಷ ಹೀನಾಯ ಪ್ರದರ್ಶನ ನೀಡಿದ ನಂತರ ನೀವು ಮತ್ತು ನಿಮ್ಮ ಪಕ್ಷದ ನಾಯಕರು ಇಂತಹ ಹೇಳಿಕೆ ನೀಡುತ್ತೀರಿ ಎಂದು ನಿರೀಕ್ಷಿಸಲಾಗಿತ್ತು. ಹಾಗೆಯೇ ನಡೆದುಕೊಂಡಿದ್ದೀರಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾರ್ಮಿಕ ವರ್ಗ ಹೆಚ್ಚಿನ ತೆರಿಗೆ ಪಾವತಿ ಮಾಡಿದರೂ ನಿಮ್ಮ ‘ಸೂಟ್-ಬೂಟ್ ಕಿ ಸರ್ಕಾರ್’ ಕಾರ್ಪೊರೇಟ್ಗಳಿಗಾಗಿ ಕೆಲಸ ಮಾಡುತ್ತದೆ. ಬಡವರು ಉಪ್ಪು ಸಹಿತ ತಾವು ಖರೀದಿಸುವ ಎಲ್ಲ ಆಹಾರಗಳ ಮೇಲೆ ಜಿಎಸ್ಟಿ ಪಾವತಿಸುತ್ತಾರೆ. ಅದೇ ಶ್ರೀಮಂತ ಧಣಿಗಳ ಜಿಎಸ್ಟಿ ಮರುಪಾವತಿಯಾಗುತ್ತದೆ. ನಾವು ಶ್ರೀಮಂತರು ಮತ್ತು ಬಡವರ ನಡುವಿನ ಅಸಮಾನತೆ ಬಗ್ಗೆ ಮಾತನಾಡಿದರೆ, ನೀವು ಅದನ್ನು ಹಿಂದೂ–ಮುಸ್ಲಿಮರಿಗೆ ಸಮೀಕರಿಸುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಮ್ಮ ಸ್ವಾತಂತ್ರ್ಯಪೂರ್ವ ಮಿತ್ರರಾದ ಮುಸ್ಲಿಂ ಲೀಗ್ ಮತ್ತು ವಸಾಹತುಶಾಹಿ ಯಜಮಾನರನ್ನು ನೀವು ಇನ್ನೂ ಮರೆತಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಮೋದಿಯವರಿಗೆ ಅವರ ಇತಿಹಾಸವನ್ನು ನೆನಪುಮಾಡಿಕೊಟ್ಟಿದ್ದಾರೆ.


