ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಗೋಕಾಕ್ ನ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿ ಮಾತಾಡಿದ ಅವರು, ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ, ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ. ಮೋದಿಯವರ ಮಾತು ನಂಬಲು ಜನ ಮೂರ್ಖರಲ್ಲ ಎಂದರು.
ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ ₹52,009 ಕೋಟಿ, ₹1,20,000 ಕೋಟಿ ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಕೊಡಲು ದುಡ್ಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಅಪ್ಪಟ ಸುಳ್ಳು ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ಮೋದಿಯವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ ಎಂದರು.
ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ? ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ಜನರು ತೀರ್ಮಾನ ಮಾಡಬೇಕಾಗುತ್ತದೆ ಎಂದರು.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡಿ ದೇಶದ ರೈತರ ಸಾಲ ಮನ್ನಾ ಮಾಡಿದ್ದರು. ಅವರು ಈ ದೇಶದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆಯನ್ನು, ಉದ್ಯೋಗ ಖಾತ್ರಿ ಅಧಿನಿಯಮ, ಮಾಹಿತಿ ಹಕ್ಕು ಅಧಿನಿಯಮ, ಶಿಕ್ಷಣದ ಹಕ್ಕು ಇವುಗಳನ್ನು ಜಾರಿಗೆ ತಂದವರು ಮನಮೋಹನ್ ಸಿಂಗ್ ಅವರು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾನೂನುಗಳು ಇವು ಎಂದು ಅರ್ಥ ಮಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಆಹಾರ ಭದ್ರತಾ ಕಾಯ್ದೆ ಇಲ್ಲದೇ ಹೋಗಿದ್ದರೆ ಬಡವರಿಗೆ ಉಚಿತ ಅಕ್ಕಿ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಜಾರಿ ಮಾಡಿದ್ದು ನರೇಂದ್ರ ಮೋದಿ ಅಲ್ಲ. ಅದರ ಶ್ರೇಯಸನ್ನು ಪಡೆಯಲು ಮೋದಿ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದರು.




