ಮೋದಿ ಕಪಾಳಕ್ಕೆ ಬಾರಿಸಬೇಕು ಹೇಳಿಕೆ ವಿವಾದ: ಶಿವರಾಜ್ ತಂಗಡಗಿ ವಿರುದ್ಧ ದೂರು

2 years ago

ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೂ ಕೆಲ ಯುವಕರು ಮೋದಿ ಅವರ ಅಭಿಮಾನಿಗಳಾಗಿದ್ದು. ಮೋದಿ ಮೋದಿ ಎಂದು ಕೂಗುತ್ತಿರುತ್ತಾರೆ. ಅಂತವರ ಕಪಾಳಕ್ಕೆ ಬಾರಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದೆ.

ಇಂತಹ ಹೇಳಿಕೆ ನೀಡುವ ಮೂಲಕ ಸಚಿವ ಶಿವರಾಜ್ ತಂಗಡಗಿ ಅವರು ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದರೆ, ಕೊಪ್ಪಳದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ ಬಿಜೆಪಿ ನಾಯಕರ ನಿಯೋಗ ಸಚಿವ ಶಿವರಾಜ ತಂಗಡಗಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.

ಮತ್ತೊಂದೆಡೆ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಸಿಟಿ ರವಿ, ಶಿವರಾಜ್ ತಂಗಡಗಿ ಅವರು ಅಪ್ಪನಿಗೆ ಹುಟ್ಟಿದ್ದರೆ ಇಂತಹ ಮಾತು ಹೇಳುತ್ತಿರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

Leave a Reply