ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವಲ್ಲಿ ಪ್ರಬುದ್ಧರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ರಾಹುಲ್ ಗಾಂಧಿಯವರ ಶಕ್ತಿ ಯೋಜನೆ ಕುರಿತ ಹೇಳಿಕೆಯನ್ನು ತಿರುಚಿ ಹೇಳಿಕೆ ನೀಡಿದ್ದ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮ ಜಾಲಾಡಿರುವ ಪ್ರಿಯಾಂಕಾ ಗಾಂಧಿ, ಜನ ಹಣದುಬ್ಬರದ ಏರಿಕೆ, ನಿರುದ್ಯೋಗ, ಆರ್ಥಿಕ ದುರಂತಗಳಿಂದ ನರಳುತ್ತಿದ್ದಾರೆ. ಯುವಕರು ನಿರಾಶೆಗೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಣದುಬ್ಬರದಿಂದ ಜನ ಮನೆ ನಡೆಸುವುದು ಕಷ್ಟಕರವಾಗಿದೆ. ನೋಟು ನಿಷೇಧ – ಜಿ.ಎಸ್.ಟಿ. ಲಕ್ಷಾಂತರ ಕೈಗಾರಿಕೆಗಳನ್ನು ಬಂದ್ ಮಾಡಿದೆ. ಆದರೆ ವಿಪಕ್ಷ ನಾಯಕರ ಹೇಳಿಕೆಯನ್ನು ತಿರುಚಿ ಜನರ ಗಮನವನ್ನು ಬೇರೆಡೆ ಸೆಳೆಯವುದು ಪ್ರಧಾನಿಯ ಆದ್ಯತೆ ಎಂದು ಕಿಡಿಕಾರಿದ್ದಾರೆ.




