ಮಂಗಳೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಮಾರ್ಪಡಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿ ಬಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನಾಂದೋಲನ ರೂಪಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು ಎಂದರು.
ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ಜನವರಿ 26ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ಮನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು ಎಂದರು.




