ದಲಿತರ ನಡೆ, ಕಾಂಗ್ರೆಸ್ ಕಡೆ ದಲಿತ ಸಮುದಾಯದ ಅಭಿಯಾನ: ಆರ್.ಧರ್ಮಸೇನಾ

3 years ago

ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಆನೇಕಲ್ ಶಾಸಕ ಬಿ.ಶಿವಣ್ಣ ಶಿಫಾರಸ್ಸಿನ ಮೇರೆಗೆ ಪಟಾಪಟ್ ನಾಗರಾಜ್, ಎಂ.ಶಂಭಪ್ಪ, ಜಗ್ನನಾಥ್ ರವರನ್ನು ಪರಿಶಿಷ್ಠ ಜಾತಿ ವಿಭಾಗಕ್ಕೆ ರಾಜ್ಯ ಸಂಚಾಲಕರಾಗಿ ನೇಮಕಾತಿ ಆದೇಶ ನೀಡಿದರು.

ಅತ್ತಿಬೆಲೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಘುಪತಿ ರೆಡ್ಡಿ, ನೆರಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಗೌಡರವರು ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಧರ್ಮಸೇನ, ಕಾಂಗ್ರೆಸ್ ಪಕ್ಷ ದಲಿತ ಸಮುದಾಯದಕ್ಕೆ ಬಹುಡೊಡ್ಡ ಅವಕಾಶಗಳನ್ನು ನೀಡಿದೆ. ಮಲ್ಲಿಕಾರ್ಜುನ್ ಖರ್ಗೆಯವರನ್ನು ಎ.ಐ.ಸಿ.ಸಿ. ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಜಿ.ಪರಮೇಶ್ವರ್, ಮುನಿಯಪ್ಪರವರು ನೂರಾರು ದಲಿತ ಮುಖಂಡರು ಕಾಂಗ್ರೆಸ್ ಪಕ್ಷದಲ್ಲಿ ಜನರ ಸೇವೆಗೆ ಸತತ ಪರಿಶ್ರಮ ಹಾಕುತ್ತಿದ್ದಾರೆ ಎಂದರು.

ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ದಲಿತರ ನಡೆ, ಕಾಂಗ್ರೆಸ್ ಪಕ್ಷದ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ. ಸರ್ಕಾರದ ಜನವಿರೋಧಿ, ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 140 ಕ್ಷೇತ್ರಗಳಲ್ಲಿ ಬಹುಮತ ಪಡೆದು ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದರು.

Leave a Reply