ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಬಗ್ಗೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕುಮಾರ್ ನಾಯಕ್ ಅವರಿಗೆ ಸಮನ್ಸ್ ನೀಡಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಸಹಾಯಕ ಸಿ.ಟಿ.ಕುಮಾರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹಲವು ವರ್ಷಗಳಿಂದ ಸಿದ್ದರಾಮಯ್ಯ ಅವರ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವ ಸಿ ಟಿ ಕುಮಾರ್ ಮೈಸೂರಿನಲ್ಲಿ ಸಿಎಂಗೆ ಸೇರಿದ ಎಲ್ಲಾ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿ ಟಿ ಕುಮಾರ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸಿಎಂ ಪತ್ನಿ ಬದಲಿ 14 ನಿವೇಶನಗಳನ್ನು ಪಡೆದ ವಿಚಾರದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರ್ಯಾಯ ನಿವೇಶನ ಹಂಚಿಕೆ ಬೆಳವಣಿಗೆ ನಡೆದ ಸಮಯದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರ್ ನಾಯಕ್ ಅವರಿಗೆ ಇಡಿ ಸಮನ್ಸ್ ನೀಡಿದೆ.
ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಈ ಪ್ರಕರಣ ನಡೆದಿದ್ದು, ಅಂದು ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಮೀನು ಮತ್ತು ಸ್ವಾಧೀನ ಪ್ರಕ್ರಿಯೆಯಿಂದ ಜಮೀನು ಕೈಬಿಟ್ಟ ಬೆಳವಣಿಗೆಗಳ ಬಗ್ಗೆ ಸರಿಯಾದ ನಿಗಾ ವಹಿಸಿಲ್ಲ ಹಾಗೂ ಪರ್ಯಾಯ ನಿವೇಶನ ನೋಂದಣಿ ಮಾಡಿಕೊಡುವ ಸಮಯದಲ್ಲಿ ದಾಖಲೆಗಳನ್ನು ಪರಿಶೀಲಿಸಿಲ್ಲ ಒತ್ತಡಕ್ಕೆ ಮಣಿದು ಕೆಲಸ ಮಾಡಿಕೊಟ್ಟಿದ್ದಾರೆ ಎಂಬ ಆರೋಪವನ್ನು ಕುಮಾರ್ ನಾಯಕ್ ಎದುರಿಸುತ್ತಿದ್ದು, ಈ ಅಂಶಗಳ ಬಗ್ಗೆ ಮಾಹಿತಿ ಪಡೆಯಲು ಅವರಿಗೆ ಇಡಿ ಸಮನ್ಸ್ ನೀಡಿದೆ ಎನ್ನಲಾಗಿದೆ.
ಸಮನ್ಸ್ ನೀಡಿದ ಕೆಲ ಹೊತ್ತಿನಲ್ಲಿಯೇ ಸಂಸದ ಕುಮಾರ್ ನಾಯಕ ಅವರು ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿ ವಿಚಾರಣೆಗೊಳಪಟ್ಟರು. ಈ ಸಮಯದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಲಿಖಿತ ಪ್ರಶ್ನಾವಳಿಯನ್ನು ಸಂಸದರಿಗೆ ನೀಡಿದ್ದು, ಅದಕ್ಕೆ ಅವರು ಉತ್ತರ ನೀಡಿದ್ದಾರೆ. ಅದಾದ ನಂತರ ಮೌಖಿಕವಾಗಿಯೂ ಕೆಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.




