ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಂಚಿಕೆ ಮಾಡಿದ ಸುಮಾರು 2 ಸಾವಿರ ನಿವೇಶನಗಳಿಗೆ ಮೂಲ ದಾಖಲೆ ಇಲ್ಲದೇ ಇರುವುದು ಜಾರಿ ನಿರ್ದೇಶನಾಲಯದ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪ್ರಾಧಿಕಾರದಿಂದ ಹಂಚಿಕೆ ಮಾಡಿರುವ 5 ಸಾವಿರ ನಿವೇಶನಗಳಲ್ಲಿ ಸುಮಾರು 2 ಸಾವಿರ ನಿವೇಶನಗಳಿಗೆ ಯಾವುದೇ ಬಾಂಡ್ ಪೇಪರ್ಗಳೇ ಇಲ್ಲದಿರುವುದು ತನಿಖೆಯಲ್ಲಿ ಪತ್ತೆಯಾಗುವ ಮೂಲಕ ಮುಡಾದಲ್ಲಿ ಬಹುದೊಡ್ಡ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ.
50:50 ಅನುಪಾತವನ್ನೇ ವರದಾನ ಮಾಡಿಕೊಂಡ ಖದೀಮರು 1950 ನಿವೇಶನಗಳನ್ನು ಪಡೆದಿದ್ದಾರೆ. 1950 ನಿವೇಗಳ ಪೈಕಿ ಒಬ್ಬೊಬ್ಬರು 30, 40, 50 ಸೈಟ್ ಪಡೆದುಕೊಂಡಿದ್ದಾರೆ. 60:40, 50:50ರ ಅನುಪಾತದಲ್ಲಿ ಒಟ್ಟು ಮುಡಾ 5 ಸಾವಿರ ಸೈಟ್ಗಳನ್ನು ಹಂಚಿಕೆ ಮಾಡಿದೆ. ಈ ಪ್ರಕರಣದ ತನಿಖೆಗೆ ಇಳಿದ ಇಡಿ ಮೂಲ ದಾಖಲೆಯನ್ನು ಹುಡುಕಿದೆ. ಈ ವೇಳೆ ಮುಡಾದಲ್ಲಿ ಈ ಆಸ್ತಿಗೆ ಸಂಬಂಧಿಸಿದಂತೆ ಬಾಂಡ್ ಪೇಪರ್ಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಮುಡಾ ಯಾವ ಮಾನದಂಡದ ಅಡಿಯಲ್ಲಿ ಈ ಸೈಟ್ ಹಂಚಿಕೆ ಮಾಡಲಾಗಿದೆ? ಈ ಸೈಟ್ಗಳನ್ನು ಪಡೆದವರ ಹಿನ್ನೆಲೆ ಏನು? ಈ ನಿವೇಶನಗಳನ್ನು ಪಡೆಯಲು ಇವರು ನೀಡಿದ ದಾಖಲೆ ಏನು ಇತ್ಯಾದಿಗಳ ವಿವರವನ್ನು ಈಗ ಇಡಿ ಕಲೆ ಹಾಕಲು ಮುಂದಾಗಿದೆ.




