ಧಾರವಾಡ: ಡಿಸೆಂಬರ್ 3, 2024 ರಂದು ಮಧ್ಯಾಹ್ನ 3.30 ಗಂಟೆಯಿಂದ ಸಾಯಂಕಾಲ 5 ಗಂಟೆಯ ನಡುವಿನ ಅವಧಿಯಲ್ಲಿ ಗರಗ ಗ್ರಾಮದ ಹಳೇ ಪೊಲೀಸ್ ಠಾಣೆ ಹತ್ತಿರ ಇರುವ ಫಿರ್ಯಾದಿ ವಾಸವಿದ್ದ ಲೀಸ್ ಮನೆಯನ್ನು ಯಾರೋ ಆರೋಪಿಗಳು, ಯಾವುದೋ ದುರುದ್ದೇಶದಿಂದ ಅಕ್ರಮ ಪ್ರವೇಶ ಮಾಡಿ. ಮನೆಯಲ್ಲಿದ್ದ ಫಿರ್ಯಾಧಿಯ ಗಂಡ ಮೃತ ಗಿರೀಶ ತಂದೆ ಮಹದೇವಪ್ಪ ಕರಡಿಗುಡ್ಡಅವರನ್ನು ಹರಿತವಾದ ಆಯುಧದಿಂದ ಸಿಕ್ಕಸಿಕ್ಕಲ್ಲಿ ಕೊಚ್ಚಿ ಕೊಲೆ ಮಾಡಿದ್ದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಸದರಿ ಆಪಾದಿತರ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಫಿರ್ಯಾದಿ ದೀಪಾ ಗಿರೀಶ ಕರಡಿಗುಡ್ಡ, ಇವರು ದಿನಾಂಕ: 03-12-2024 ರಂದು ರಾತ್ರಿ 20.20 ಗಂಟೆಗೆ ಠಾಣೆಗೆ ಹಾಜರಾಗಿ ನೀಡಿದ ದೂರನ್ನು ಗರಗ ಪೊಲೀಸ್ ಠಾಣೆಯ ಗರಗ ಪಿಎಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಈ ಬಗ್ಗೆ ಸೂಕ್ತ ತನಿಖೆ ಮತ್ತು ಆರೋಪಿ ಪತ್ತೆಗಾಗಿ ಧಾರವಾಡ ಜಿಲ್ಲಾ ಎಸ್.ಪಿ ಡಾ. ಗೋಪಾಲ ಬ್ಯಾಕೋಡ, ಐಪಿಎಸ್ ನೇತೃತ್ವದಲ್ಲಿ ಎನ್.ವಿ.ಬರಮನಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಎಸ್.ಎಮ್.ನಾಗರಾಜ ಇವರ ಮೇಲುಸ್ತುವಾರಿಯಲ್ಲಿ ತನಿಖಾಧಿಕಾರಿಗಳಾದ ಸಮೀರ ಮುಲ್ಲಾ, ಸಿಪಿಐ ಗರಗ ಮತ್ತು ಸಿದ್ದರಾಮಪ್ಪ ಹುಣ್ಣದ, ಪಿ.ಎಸ್.ಐ ಕಾನ್ಸು, ಎಫ್.ಎಮ್. ಮಂಟೂರ, ಪಿಎಸ್ಐ ಹೆಚ್ಚುವರಿ, ಗರಗ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ತಂಡ ರಚಿಸಿ ಕೂಡಲೇ ತನಿಖೆ ಪ್ರಾರಂಭಿಸಿ ಪ್ರಕರಣದಲ್ಲಿಯ ಒಟ್ಟು 04 ಜನ ಆರೋಪಿಗಳನ್ನು ಬಂಧಿಸಲಾಗಿದೆ.




