ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನ ಕಾರ್ಯಕರ್ತರು ಯೋಧರಂತೆ ಕೆಲಸ ಮಾಡಿದರು. ಆದರೆ ಒಂದೆರಡು ಸಮುದಾಯ ಕಾಂಗ್ರೆಸ್ ಪರವಾಗಿ ನಿಂತಿದ್ದು, ಈ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣವಾಯಿತು ಎಂದು ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ ಎಂದರು.
ನಮ್ಮ ಪಕ್ಷ ಅವರ ಪರವಾಗಿ ನಿಂತರೂ, ಮೀಸಲಾತಿ ಸೇರಿದಂತೆ ಎಷ್ಟೇ ಕೊಡುಗೆಗಳನ್ನು ನೀಡಿದರೂ ಅವರು ನಮ್ಮ ಕೈ ಹಿಡಿದಿಲ್ಲ. ಸಮುದಾಯವನ್ನು ಇದುವರೆಗೆ ನಾವು ನಂಬಿಕೊಂಡು ಬಂದಿದ್ದೆವು. ಈ ಸಲ ಅವರು ನಮ್ಮೊಂದಿಗೆ ನಿಲ್ಲದಿರುವುದು ಸಹ ಫಲಿತಾಂಶದ ಏರುಪೇರಿಗೆ ಕಾರಣವಿರಬಹುದು. ಅವರನ್ನು ಮೀರಿಯು ಪಕ್ಷದ ಬದ್ದ ಕಾರ್ಯಕರ್ತರಿದ್ದಾರೆ. ಅವರೇ ನಮ್ಮ ಬೆನ್ನೆಲುಬು. ಅವರು ಎಂದಿನಂತೆ ಈ ಚುನಾವಣೆಯಲ್ಲೂ ನಮ್ಮ ಕೈ ಹಿಡಿದಿದ್ದಾರೆ ಎಂದರು.
ಇದು ಜೆಡಿಎಸ್ ಕ್ಷೇತ್ರ. ಯಾವುದೇ ಕಾರಣಕ್ಕೂ ಬಿಟ್ಟು ಕೊಡದೆ ನಾವೇ ಇಲ್ಲಿ ನಿಲ್ಲಬೇಕು ಎಂಬ ಸ್ವಾರ್ಥದಿಂದ ನಾವು ಚುನಾವಣೆ ಎದುರಿಸಿದ್ದರೆ ನಾನು ಖಂಡಿತಾ ಗೆಲ್ಲುತ್ತಿದ್ದೆ. ಯಾಕೆಂದರೆ, ಚುನಾವಣೆಗೆ ನಮಗೆ ಕನಿಷ್ಠ ನಾಲ್ಕು ತಿಂಗಳು ಸಮಯ ಸಿಗುತ್ತಿತ್ತು. ಆದರೆ, ನಾವು ಬಿಜೆಪಿ ಜೊತೆ ಮೈತ್ರಿಯಾಗಿದ್ದರಿಂದ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳದೆ ಮೈತ್ರಿ ಪಕ್ಷದ ನಾಯಕರ ಅಭಿಪ್ರಾಯ ಮತ್ತು ಭಾವನೆಗೂ ಗೌರವ ಕೊಡಬೇಕಿತ್ತು. ಅದೇ ಕಾರಣಕ್ಕೆ ನಾಮಪತ್ರ ಸಲ್ಲಿಸುವ ಹಿಂದಿನ ದಿನ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿತು ಎಂದರು.




